Tuesday, October 5, 2010

ಕಟೀಲಿನಲ್ಲಿ ಅ.10ರಂದು ಹುಲಿವೇಷ, ಸ್ತಬ್ದಚಿತ್ರ ಸ್ಪರ್ಧೆ

ರಥಬೀದಿಯಲ್ಲಿ ಅಕ್ಟೋಬರ್ ೧೦ರಂದು ದಿನವಿಡೀ ನೂರಾರು ಹುಲಿಗಳು ದಿನವಿಡೀ ಕುಣಿಯಲಿವೆ. ನವರಾತ್ರಿಯ ದಿನಗಳಲ್ಲಿ ಸಾವಿರಕ್ಕೂ ಹುಲಿವೇಷಗಳು ಕಟೀಲಿಗೆ ಬಂದು ಕುಣಿದು ಹರಕೆ ತೀರಿಸಿಹೋಗುವುದು ಸಂಪ್ರದಾಯ. ಹಾಗೆಯೇ ಕೊಡೆತ್ತೂರು, ಎಕ್ಕಾರು, ಕಟೀಲು ಗ್ರಾಮಗಳಿಂದ ಹುಲಿ ಸೇರಿದಂತೆ ಅನೇಕ ವೇಷಧಾರಿಗಳು ಮೆರವಣಿಗೆಯಲ್ಲಿ ಬಂದು ಕಟೀಲಿನ ರಥಬೀದಿಯಲ್ಲಿ ನರ್ತಿಸಿ, ಶ್ರೀ ದೇವಿಯ ಸೇವೆ ಸಲ್ಲಿಸಿ ಹೋಗುತ್ತಾರೆ. ಕಟೀಲು ಊರಿನ ಸಮಿತಿಯವರು ನವರಾತ್ರಿಯ ಮೂರನೇ ದಿನ ಮೆರವಣಿಗೆಯನ್ನು ನಡೆಸುತ್ತಾರೆ. ಕಟೀಲಿನ ತೃತೀಯ ದಿನದ ಮೆರವಣಿಗೆಗೆ ಈ ಬಾರಿ ಇಪ್ಪತ್ತೈದನೇ ವರ್ಷ. ಈ ಸಂಭ್ರಮಕ್ಕಾಗಿ ತಾ.೧೦ರಂದು ಹುಲಿವೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕರಾವಳಿಯ ಹತ್ತು ತಂಡಗಳು ಸ್ಪರ್ಧೆಯಲ್ಲಿವೆ. ಅಂದು ಬೆಳಿಗ್ಗೆ ೮.೩೦ಕ್ಕೆ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಸ್ಪರ್ಧೆ ಉದ್ಘಾಟಿಸಲಿದ್ದಾರೆ. ಸಂಜೆ ೫.೩೦ಕ್ಕೆ ಕಿನ್ನಿಗೋಳಿಯಿಂದ ಕಟೀಲುವರೆಗೆ ಸ್ತಬ್ದಚಿತ್ರ ಸ್ಪರ್ಧೆ ನಡೆಯಲಿದ್ದು ೧೫ಟ್ಯಾಬ್ಲೋಗಳು ಸ್ಪರ್ಧೆಯಲ್ಲಿವೆ. ವೆಂಕಟರಮಣ ಆಸ್ರಣ್ಣ ಸ್ಪರ್ಧೆ ಉದ್ಘಾಟಿಸಲಿದ್ದಾರೆ. ವೈಭವದ ಮೆರವಣಿಗೆಯ ಬಳಿಕ ರಾತ್ರಿ ನಡೆಯಲಿರುವ ಸಭಾಕಾರ್‍ಯಕ್ರಮದಲ್ಲಿ ಪಿ.ಕೃಷ್ಣ ಭಟ್, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಮಾಣಿಲದ ಮೋಹನದಾಸ ಸ್ವಾಮೀಜಿ, ಕಟೀಲಿನ ವಾಸುದೇವ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತ ಆಸ್ರಣ್ಣ, ಕೊರ್ಗಿ ವೇಂಕಟೇಶ್ವರ ಉಪಾಧ್ಯಾಯ, ಸಾಂಸದ ನಳಿನ್ ಕುಮಾರ್, ಶಾಸಕ ಅಭಯಚಂದ್ರ ಮುಂತಾದ ಗಣ್ಯರ ಭಾಗವಹಿಸಲಿದ್ದಾರೆ. ಬಳಿಕ ತೆಂಕು ಬಡಗು ತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟವಿದೆ ಎಂದು ಪ್ರಕಟನೆ ಸಮಿತಿ ಅಧ್ಯಕ್ಷ ರಾಮಗೋಪಾಲ್ ತಿಳಿಸಿದ್ದಾರೆ.

No comments:

Post a Comment