Friday, December 10, 2010

ಗಿಡಿಗೆರೆ ದೈವಸ್ಥಾನಕ್ಕೆ ಶಿಲಾನ್ಯಾಸ

ಕಟೀಲು ಗಿಡಿಗೆರೆ ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನಕ್ಕೆ ಶುಕ್ರವಾರ ಶಿಲಾನ್ಯಾಸ ಮಾಡಲಾಯಿತು. ಶಿಬರೂರು ಹಯಗ್ರೀವ ತಂತ್ರಿ, ಕಟೀಲು ಹರಿನಾರಾಯಣದಾಸ ಆಸ್ರಣ್ಣ, ಪಂಜ ವಾಸುದೇವ ಭಟ್ ಧಾರ್ಮಿಕ ವಿಧಿಗಳ ಮೂಲಕ ಶಿಲಾನ್ಯಾಸಗೈದರು.ಸಚಿವ ವಿ.ಎಸ್.ಆಚಾರ್‍ಯ, ಸಾಂಸದ ನಳಿನ್ ಕುಮಾರ್, ಶಾಸಕ ಅಭಯಚಂದ್ರ, ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಕಟೀಲು ಚರ್ಚ್‌ನ ಫಾ.ರಾಬರ್ಟ್ ಕ್ರಾಸ್ತಾ, ಮಾಜಿ ಶಾಸಕ ಸೋಮಪ್ಪ ಸುವರ್ಣ, ಜಿ.ಪಂ.ಸದಸ್ಯರಾದ ಶೈಲಾ ಸಿಕ್ವೇರ, ಪ್ರಮೋದ್ ಕುಮಾರ್, ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ರವಿಶಂಕರ ಶೆಟ್ಟಿ, ಎಂಆರ್‌ಪಿಎಲ್‌ನ ಲಕ್ಷ್ಮೀ ಕುಮಾರನ್, ಎಕ್ಕಾರು ಮೋನಪ್ಪ ಶೆಟ್ಟಿ, ಸುಭಾಶ್ಚಂದ್ರ ಪಡಿವಾಳ್, ಗಿರೀಶ್ ಶೆಟ್ಟಿ, ಸೀತಾರಾಮ ಕೊಂಚಾಡಿ, ಲೀಲಾಧರ ಶೆಟ್ಟಿ, ತಿಮ್ಮಪ್ಪ ಮೇಸ್ತ್ರಿ ಮತ್ತಿತರರಿದ್ದರು. ಅರುಣಾ ಕುಮಾರಿ ಪ್ರಾರ್ಥಿಸಿದರು. ಪುರುಷೋತ್ತಮ ಶೆಟ್ಟಿ ಸ್ವಾಗತಿಸಿದರು. ರುಕ್ಮಯ, ಕಿರಣ್ ಪಕ್ಕಳ ಕಾರ್‍ಯಕ್ರಮ ನಿರೂಪಿಸಿದರು.

No comments:

Post a Comment