Monday, December 12, 2011

ಕಟೀಲು ಪ.ಪೂ.ಕಾಲೇಜು ವಾರ್ಷಿಕೋತ್ಸವ


ಕಟೀಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನ ವಾರ್ಷಿಕೋತ್ಸವ ಭಾನುವಾರ ನಡೆಯಿತು.
ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ, ಬದ್ರಿಯಾ ಕಾಲೇಜಿನ ಇಸ್ಮಾಯಿಲ್, ರೆ.ಫಾ.ರಾಬರ್ಟ್ ಕ್ರಾಸ್ತಾ, ನ್ಯಾಯವಾದಿ ದಿನೇಶ್ ಉಳೆಪಾಡಿ, ಪದವೀ ಕಾಲೇಜಿನ ಪ್ರಾಚಾರ‍್ಯ ಬಾಲಕೃಷ್ಣ ಶೆಟ್ಟಿ ಪ್ರೌಢಶಾಲೆಯ ಉಪಪ್ರಾಚಾರ‍್ಯ ಸುರೇಶ್ ಭಟ್, ಶಿಕ್ಷಕ ರಕ್ಷಕ ಸಂಘದ ಎಕ್ಕಾರು ಮೋನಪ್ಪ ಶೆಟ್ಟಿ, ವಿದ್ಯಾರ್ಥಿ ನಾಯಕ ಆದಿತ್ಯ ಮತ್ತಿತರರಿದ್ದರು. ಪ್ರಾಚಾರ‍್ಯ ಜಯರಾಮ ಪೂಂಜ ಸ್ವಾಗತಿಸಿದರು. ಭಾರತೀ ಶೆಟ್ಟಿ ಕಾರ‍್ಯಕ್ರಮ ನಿರೂಪಿಸಿದರು.

No comments:

Post a Comment