Monday, September 24, 2012

ಕಟೀಲಿನಲ್ಲಿ ರಕ್ತದಾನ ಶಿಬಿರ


ಕಟೀಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯಲ್ಲಿ ಭಾನುವಾರ ನಡೆದ ರಕ್ತದಾನ ಶಿಬಿರವನ್ನು ಬಜಪೆ ಪೋಲೀಸ್ ಇನ್ಸ್‌ಪೆಕ್ಟರ್ ದಿನಕರ್ ಶೆಟ್ಟಿ, ಕಟೀಲಿನ ಅರ್ಚಕ ಕಮಲಾದೇವೀಪ್ರಸಾದ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ಜಿ.ಪಂ.ಶಿಕ್ಷಣ ಆರೋಗ್ಯ ಸಮಿತಿಯ ಈಶ್ವರ ಕಟೀಲ್, ಕ್ಷೇತ್ರ ಬಿಜೆಪಿ ಕಾರ‍್ಯದರ್ಶಿ ಆದರ್ಶ ಶೆಟ್ಟಿ, ಕೇಶವ್, ಮೆನ್ನಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಜನಾರ್ದನ ಕಿಲೆಂಜೂರು, ಅರುಣ್, ಎಕ್ಕಾರು ಗ್ರಾ.ಪಂ. ಸದಸ್ಯ ಚಂದ್ರಹಾಸ್, ಉಪಪ್ರಾಚಾರ‍್ಯ ಸುರೇಶ್ ಭಟ್ ಮತ್ತಿತರರು ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿದರು.
ಕೆ.ಎಂ.ಸಿ ಆಸ್ಪತ್ರೆ, ವೆನ್‌ಲಾಕ್ ಆಸ್ಪತ್ರೆಗಳ ಸಹಯೋಗದಲ್ಲಿ ರಾಜರತ್ನಪುರ ವೀರಮಾರುತಿ ವ್ಯಾಯಾಮ ಶಾಲೆ, ಕಟೀಲು ಪ್ರೌಢಶಾಲೆ ಹಳೆವಿದ್ಯಾರ್ಥಿ ಸಂಘ, ನಂದಿನಿ ಯುವಕ ವೃಂದ, ಎಕ್ಕಾರು ವಿಜಯ ಯುವ ಸಂಗಮ, ಕಟೀಲ್ ಫ್ರೆಂಡ್ಸ್, ದೇವರಗುಡ್ಡೆ ಕ್ಲಬ್, ಕಟೀಲ್ ಸ್ಪೋರ್ಟ್ಸ್ ಕ್ಲಬ್, ದುರ್ಗಾಂಬಿಕಾ ಯುವಕ ಮಂಡಲ ಮತ್ತಿತರ ಸಂಘಗಳ ಆಶ್ರಯದಲ್ಲಿ ನಡೆದ ಶಿಬಿರದಲ್ಲಿ ೬೫ ಮಂದಿ ರಕ್ತದಾನ ಮಾಡಿದರು.

No comments:

Post a Comment