Sunday, May 26, 2013

ಯಕ್ಷಗಾನ ಕಲಾವಿದರಿಗೆ ಆರೋಗ್ಯ ತಪಾಸಣೆ


ಕಟೀಲು : ಇಲ್ಲಿನ ಯಕ್ಷಗಾನ ಮೇಳಗಳು ಹಾಗೂ ಕಟೀಲು ದೇಗುಲದ ಸಿಬಂದಿಗಳಿಗೆ ಸುರತ್ಕಲ್ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯರಿಂದ ಉಚಿತ ಆರೋಗ್ಯ ಶಿಬಿರ ನಡೆಯಿತು.
ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ ಶಿಬಿರ ಉದ್ಘಾಟಿಸಿದರು. ಶ್ರೀನಿವಾಸ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ವಾಸುದೇವ ಮಾತನಾಡಿ ತಮ್ಮ ಆಸ್ಪತ್ರೆಯಲ್ಲಿ ಇರುವ ಅನೇಕ ಸೌಲಭ್ಯಗಳನ್ನು ಅರ್ಹರು ಬಳಸಿಕೊಳ್ಳಬೇಕು. ಸಾಮಾಜಿಕವಾಗಿಯೂ ತಮ್ಮ ಆಸ್ಪತ್ರೆ ಜನರ ಬಳಿಗೆ ಹೋಗುತ್ತಿದೆ ಎಂದು ತಿಳಿಸಿದರು. ಅರ್ಚಕ ಹರಿನಾರಾಯಣದಾಸ ಆಸ್ರಣ್ಣ, ಪ್ರೌಢಶಾಲೆಯ ಉಪಪ್ರಾಚಾರ್ಯ ಸುರೇಶ್ ಭಟ್, ಶ್ರೀನಿವಾಸ ಸಂಸ್ಥೆಯ ಜನಾರ್ದನ ಮತ್ತಿತರರಿದ್ದರು.


No comments:

Post a Comment