Sunday, July 6, 2014

ಕಟೀಲಿನಲ್ಲಿ ರಕ್ತದಾನ

ಕಟೀಲು:  ಶ್ರೀ ದುರ್ಗಾಪರಮೇಶ್ವರೀ ದೇವಳ, ಕಟೀಲು ದೇವಳ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ, ಕಟೀಲು ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ಘಟಕ, ನಂದಿನಿ ಯುವಕ ವೃಂದ, ವೀರಮಾರುತಿ ವ್ಯಾಯಾಮ ಶಾಲೆ ರಾಜರತ್ನಪುರ, ಶ್ರೀ ರಾಮ ಯುವಕ ವೃಂದ ಗೋಳಿಜೋರ, ದೇವರ ಗುಡ್ಡೆ ಗೇಮ್ಸ್ ಕ್ಲಬ್, ಕಟೀಲು ಫ್ರೆಂಡ್ಸ್ ಕ್ಲಬ್, ಕಾರು-ರಿಕ್ಷಾ ಚಾಲಕ ಮಾಲಕರ ಸಂಘ, ನಂದಿನಿ ಬ್ರಾಹ್ಮಣ ಸಭಾ ಕಟೀಲು, ಶ್ರೀ ದುರ್ಗಾಂಬಿಕಾ ಯುವಕ ಯುವತಿ ಮಂಡಲ ಗಿಡಿಗೆರೆ, ಸಜ್ಜನ ಬಂಧುಗಳು ಕಿನ್ನಿಗೋಳಿ, ಸೌತ್ ಕೆನರಾ ಫೋಟೊಗ್ರಾಫರ‍್ಸ್ ಅಸೋಸಿಯೇಷನ್ ಮೂಲ್ಕಿ ವಲಯ, ಕೊಂಡೇಲ ತರುಣ ವೃಂದ, ಕಟೀಲು ಸ್ಪೋರ್ಟ್ಸ್-ಗೇಮ್ಸ್ ಕ್ಲಬ್, ಯಕ್ಷಗಾನ ಬಯಲಾಟ ಸಮಿತಿ ಕುಕ್ಕಟ್ಟೆ, ಕೆ.ಎಂ.ಸಿ ಆಸ್ಪತ್ರೆ ಹಾಗೂ ವೆನ್ಲಾಕ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಶಿಬಿರ ಕಟೀಲು ಸರಸ್ವತೀ ಸದನದಲ್ಲಿ ಭಾನುವಾರ ನಡೆಯಿತು. ಕಟೀಲು ದೇವಳ ಅರ್ಚಕ ಹರಿನಾರಾಯಣ ಆಸ್ರಣ್ಣ ಹಾಗೂ ಜಿ. ಪಂ. ಸದಸ್ಯ ಈಶ್ವರ್ ಕಟೀಲು ರಕ್ತದಾನ ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾ.ಪಂ. ಅಧ್ಯಕ್ಷ ಜನಾರ್ದನ ಕಿಲೆಂಜೂರು, ಉಪನ್ಯಾಸಕ ಕೇಶವ ಎಚ್, ಪ್ರಕಾಶ್ ಆಚಾರ್, ದೇವದಾಸ್ ಮಲ್ಯ, ದಾಮೋದರ್ ಶೆಟ್ಟಿ, ಕೇಶವ ಕರ್ಕೇರ, ನವೀನ್ ಕುಮಾರ್, ೧೧೨ ಮಂದಿ ರಕ್ತದಾನ ಮಾಡಿದರು.


No comments:

Post a Comment