Friday, July 25, 2014

ದೇವಳ ಪದವಿ ಪೂರ್ವ ಕಾಲೇಜಿನ ವಿವಿಧ ಪಠ್ಯಪೂರಕ ಸಂಘ ಚಟುವಟಿಕೆಗಳ ಉದ್ಘಾಟನೆ

ಕಟೀಲು : ಪಾಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ಶುಕ್ರವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜಿನ ವಿವಿಧ ಪಠ್ಯಪೂರಕ ಸಂಘ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ
 ಮಾತನಾಡಿದರು.
ಕಟೀಲು ದೇವಳ ಅನುವಂಶಿಕ ಅರ್ಚಕ ವಾಸುದೇವ ಆಸ್ರಣ್ಣ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಈಶ್ವರ್ ಕಟೀಲ್, ಪ್ರಿನ್ಸಿಪಾಲ್ ಜಯರಾಮ ಪೂಂಜ, ಉಪನ್ಯಾಸಕಿ ಶುಭಾ ರಾವ್ ಮತ್ತಿತರರಿದ್ದರು.
ಈ ಸಂದರ್ಭ ಕಾಲೇಜಿನ ಹಳೇ ವಿದ್ಯಾರ್ಥಿ ಸುಮಿತ್ ಆಚಾರ್ಯ ಕಾಲೇಜಿಗೆ ೨ ಉಚಿತ ಲ್ಯಾಪ್ ಟಾಪ್ ಗಳನ್ನು ಕೊಡುಗೆಯಾಗಿ ನೀಡಿದರು. ತಿಲಕ್ ರಾಜ್ ಹಾಗೂ ಅನುಷಾ ಕಾರ್ಯಕ್ರಮ ನಿರೂಪಿಸಿದರು.


No comments:

Post a Comment