Monday, July 7, 2014

ಕಟೀಲಿಗೆ ಮುಖ್ಯ ಕಾರ್ಯದರ್ಶಿ ಭೇಟಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ದಂಪತಿ ಸಹಿತ ಸೋಮವಾರ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಉಡುಪಿ ಜಿಲ್ಲಾಧಿಕಾರಿ ಮುದ್ದು ಮೋಹನ್, ಉಡುಪಿ ಎಸ್‌ಪಿ ಡಾ. ಬೋರಲಿಂಗಯ್ಯ, ಮಂಗಳೂರು ಉಪವಿಭಾಗಾಧಿಕಾರಿ ಪ್ರಶಾಂತ್, ಮುಜರಾಯಿ ಇಲಾಖೆಯ ನಾಗರಾಜ್, ಕಟೀಲು ದೇಗುಲದ ಆಡಳಿತಾಧಿಕಾರಿ ನಿಂಗಯ್ಯ, ಮೊಕ್ತೇಸರ ವಾಸುದೇವ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ಪ್ರಬಂಧಕ ವಿಜಯಕುಮಾರ ಶೆಟ್ಟಿ ಮತ್ತಿತರರಿದ್ದರು.

No comments:

Post a Comment