Friday, July 25, 2014

ಕಟೀಲು ಪದವಿ ಕಾಲೇಜು ಸಂಘಗಳ ಉದ್ಘಾಟನೆ

ವಿದ್ಯಾರ್ಥಿ ಸಂಘಟನೆಯಲ್ಲಿ ವಿದ್ಯಾರ್ಥಿಯೊಬ್ಬನ ಬೌದ್ಧಿಕ, ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಸನ ಬೆಳಗುತ್ತದೆ. ಬದಲಾವಣೆಗೆ ಒಗಿಕೊಳ್ಳಬೇಕಾದ ಈ ಕಾಲದಲ್ಲಿ ಬದುಕಿಗೆ ಪೂರಕವಾದ ಶಿಕ್ಷಣ ನೀಡಬೇಕಾಗಿದೆ. ವಿವಿಧ ಕೋನಗಳಲ್ಲಿ ಚಿಂತಿಸುವ ಅದಮ್ಯ ಶಕ್ತಿ ವಿದ್ಯಾರ್ಥಿಗಳಲ್ಲಿದೆ ಅದನ್ನು ಒರೆಗೆ ಹಚ್ಚುವ ಕೆಲಸ ಶಿಕ್ಷಕರಿಂದಾಗಬೇಕು ಎಂದು ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ರಾಜಶೇಖರ್ ಹೆಬ್ಬಾರ್ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ
ದೇವಳ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಚಟುವಟಿಕೆಗಳ ಸಂಘಗಳನ್ನು ಶನಿವಾರ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.
ಕಟೀಲು ದೇವಳ ಆಡಳಿತಾಧಿಕಾರಿ ನಿಂಗಯ್ಯ ಕಾರ್ಯಕ್ರಮ ಉದ್ಘಾಟಿಸಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮಗೆ ಸಿಕ್ಕ ಸದವಕಾಶಗಳನ್ನು ಸೂಕ್ತವಾಗಿ ಬಳಸಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಸಮಾಜದ ಒಳಿತು ಬಯಸಬೇಕು ಎಂದು ಹೇಳಿದರು.
ಕಟೀಲು ದೇವಳ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಆಶೀರ್ವಚನಗೈದರು.
ವಿದ್ಯಾರ್ಥಿ ಕ್ಷೇಮಪರಿಪಾಲನಾಧಿಕಾರಿ  ಡಾ| ಕೃಷ್ಣ ಕಾಂಚನ್, ಕಾಲೇಜು ವಿದ್ಯಾರ್ಥಿ ಸಂಘ ಅಧ್ಯಕ್ಷ ಗಣೇಶ್, ಕಾರ್ಯದರ್ಶಿ ಸುದರ್ಶನ್, ಜೊತೆ ಕಾರ್ಯದರ್ಶಿ ಚೈತ್ರಾ ಉಪಸ್ಥಿತರಿದ್ದರು.
ಕಟೀಲು ದೇವಳ ಕಾಲೇಜು ಪ್ರಿನ್ಸಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಸರಿತಾ ವಂದಿಸಿದರು.  ವಿದ್ಯಾರ್ಥಿನಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು. 

No comments:

Post a Comment