Thursday, September 11, 2014

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ : ಕಟೀಲು, ಬಜ್ಪೆಗೆ ಪ್ರಶಸ್ತಿ

ಕಟೀಲು : ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ಹಾಗೂ ಶ್ರೀ ದುರ್ಗಾಪರಮೇಶ್ವರೀ ದೇವಳ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಕಟೀಲು ಆಶ್ರಯದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಳದ ಸಹಕಾರದೊಂದಿಗೆ ಕಟೀಲಿನಲ್ಲಿ ನಡೆದ ಮಂಗಳೂರು ಉತ್ತರ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಟೀಲು, ಬೋಂದೇಲ್ ಹಾಗೂ ಬಜಪೆ ಶಾಲಾ ತಂಡಗಳು ಪ್ರಶಸ್ತಿ ಪಡೆದವು.
ಉದ್ಘಾಟನೆ ಸಮಾರಂಭದಲ್ಲಿ ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣರು, ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಮಂಗಳೂರು ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಕರಾದ ರಘುನಾಥ ಶೆಟ್ಟಿ ಹಾಗೂ ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ದಯಾನಂದ ಮಾಡ ಎಕ್ಕಾರು, ಉಪ ಪ್ರಾಂಶುಪಾಲರಾದ ಶ್ರೀ ಕೆ. ವಿ. ಶೆಟ್ಟಿ, ದೈಹಿಕ ಶಿಕ್ಷಕರಾದ ಪುಂಡಲೀಕ ಕೊಠಾರಿ ಉಪಸ್ಥಿತರಿದ್ದರು.
ಶ್ರೀಹರಿನಾರಾಯಣದಾಸ ಆಸ್ರಣ್ಣರು ವಿಜೇತರಿಗೆ ಬಹುಮಾನ ವಿತರಿಸಿದರು.
ಪ್ರಾಥಮಿಕ ಶಾಲಾ: ಬಾಲಕರು:
ಪ್ರಥಮ: ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆ, ಕಟೀಲು.
ದ್ವಿತೀಯ: ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೋಂದೇಲ್, ಮಂಗಳೂರು.
ಪ್ರಾಥಮಿಕ ಶಾಲಾ ಬಾಲಕಿಯರು:



ಪ್ರಥಮ: ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆ, ಕಟೀಲು.
ದ್ವಿತೀಯ: ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೋಂದೇಲ್, ಮಂಗಳೂರು.
ಪ್ರೌಢಶಾಲಾ ವಿಭಾಗ: ಬಾಲಕರು:
ಪ್ರಥಮ: ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಬಜ್ಪೆ.
ದ್ವಿತೀಯ: ಶ್ರೀ ದುರ್ಗಾಪರಮೇಶ್ವರೀ ದೇವಳ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ,
       ಕಟೀಲು
ಪ್ರೌಢಶಾಲಾ ವಿಭಾಗ: ಬಾಲಕಿಯರು:
ಪ್ರಥಮ: ಶ್ರೀ ದುರ್ಗಾಪರಮೇಶ್ವರೀ ದೇವಳ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ,
      ಕಟೀಲು
ದ್ವಿತೀಯ: ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಬಜ್ಪೆ.

No comments:

Post a Comment