Thursday, November 6, 2014

ಕಟೀಲಿನಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಭ್ರಮರ ೨೦೧೪ ಸಮಾರೋಪ

ಕಟೀಲು : ಗ್ರಾಮೀಣ ಪ್ರತಿಭೆಗಳಿಗೆ ಪ್ರತಿಭಾ ಕಾರಂಜಿ ಉತ್ತಮ ಅವಕಾಶ ಎಂದು ಕಟೀಲು ಶಿಕ್ಷಣ ಸಂಸ್ಥೆಗಳ ಸಂಚಾಲಕ ವಾಸುದೇವ ಆಸ್ರಣ್ಣ ಹೇಳಿದರು.
ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಕಾರಿಯವರ ಕಛೇರಿ, ಮಂಗಳೂರು ತಾ. ಉತ್ತರ ವಲಯ  ಆಶ್ರಯದಲ್ಲಿ ಗುರುವಾರ ಕಟೀಲು ದೇವಳ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ ನಡೆದ ಮಂಗಳೂರು ತಾ. ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಭ್ರಮರದ ಸಮಾರೋಪ ಸಮಾರಂಭದಲ್ಲಿ  ಮಾತನಾಡಿದರು.
ಕಟೀಲು ದೇವಳ ಅರ್ಚಕರಾದ ಅನಂತ ಪದ್ಮನಾಭ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ, ಮೆನ್ನಬೆಟ್ಟು ಗ್ರಾ. ಪಂ.ಅಧ್ಯಕ್ಷ ಜನಾರ್ದನ ಕಿಲೆಂಜೂರು, ಪ.ಪೂ. ಪ್ರಾಚಾರ್ಯ ಜಯರಾಮ ಪೂಂಜ, ಹಿ. ಪ್ರಾ. ಶಾಲಾ ಮುಖ್ಯ ಶಿಕ್ಷಕಿ ಮಾಲತಿ, ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಕಾರಿ ಲೋಕೇಶ್ ಸಿ, ಕಟೀಲು ಶಾಲಾ ಸುವರ್ಣ ಮಹೋತ್ಸವ ಸಮಿತಿ ಕಾರ್ಯಧ್ಯಕ್ಷ ಮಧುಕರ ಅಮೀನ್, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ , ಬೆಂಗಳೂರು ಸಮಿತಿ ಅಧ್ಯಕ್ಷ ಪ್ರಭಾಕರ ರಾವ್, ಕ್ಷೇತ್ರ ಸಮನ್ವಯಕಾರಿ ಪೀತಾಂಬರ ಕೆ., ತಾಲೂಕು ದೈಹಿಕ ಶಿಕ್ಷಣಾಕಾರಿ ರಘುನಾಥ್, ಶಿಕ್ಷಣ ಇಲಾಖೆಯ ಪ್ರವೀಣ್ ಕುಟಿನ್ಹೊ, ರಾಧಾಕೃಷ್ಣ, ಕಟೀಲು ದೇವಳ ಪ್ರೌಢ ಶಾಲಾ ವೈಸ್ ಪ್ರಿನ್ಸಿಪಾಲ್ ಕೆ. ವಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕ ಶ್ರೀವತ್ಸ ಹಾಗೂ ಸಾಯಿನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು


No comments:

Post a Comment