Saturday, December 27, 2014

ಕಟೀಲು ದೇವಳ ಶಿಕ್ಷಣ ಸಂಸ್ಥೆಗಳ ವಿದ್ಯಾ ಸಂಭ್ರಮ ಉದ್ಘಾಟನೆ

ಮತಬೇಧವಿಲ್ಲದ ದೇಗುಲದಲ್ಲಿ ಮಕ್ಕಳೆಂಬ ದೇವರ ನಿರ್ಮಾಣ- ಫಲಿಮಾರು ಸ್ವಾಮೀಜಿ
ಕಟೀಲು : ಕಟೀಲಿನಲ್ಲಿ ಎರಡು ದೇಗುಲಗಳು. ಒಂದು ಅರ್ಚಕರು ಆರಾಧಿಸುವ ಕಟೀಲು ದೇವಿಯ ದೇಗುಲ. ಮತ್ತೊಂದು ಮಕ್ಕಳೆಂಬ ದೇವರನ್ನು ನಿರ್ಮಿಸುವ ಮತಬೇಧವಿಲ್ಲದ ವಿದ್ಯಾ ದೇಗುಲ ಎಂದು ಕಟೀಲು ಶಾಲೆಯ ಹಳೆ ವಿದ್ಯಾರ್ಥಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಹೇಳಿದರು.
ಅವರು ಶನಿವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಶಿಕ್ಷಣ ಸಂಸ್ಥೆಗಳ ವಿದ್ಯಾ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದೇ ಸಂದರ್ಭ ವಿದ್ಯಾ ಸದನ ಸಭಾಭವನ, ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಸವಿನೆನಪಿನ ಸುವರ್ಣ ಸೌಧದ ಕಛೇರಿ ಕೊಠಡಿ, ಕಂಪ್ಯೂಟರ್ ಕೇಂದ್ರಗಳ ಉದ್ಘಾಟನೆ ಹಾಗೂ ವಿಜ್ಞಾನ ವಿಭಾಗದ ಎರಡನೇ ಮಹಡಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಯುವ ಸಬಲೀಕರಣ ಕ್ರೀಡೆ ಮತ್ತು ಮೀನುಗಾರಿಕಾ ರಾಜ್ಯ ಸಚಿವ ಅಭಯಚಂದ್ರ ಜೈನ್, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹಾಗೂ ಸಾಂಸದ ನಳಿನ್ ಕುಮಾರ್ ಉದ್ಘಾಟನೆಗಳನ್ನು ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಸಭಾಭವನಕ್ಕೆ ರೂ.೩ಲಕ್ಷ ಅನುದಾನ ನೀಡುವುದಾಗಿ ಹೇಳಿದರು.
ಕಟೀಲು ದೇವಳ ಮೊಕ್ತೇಸರ ವಾಸುದೇವ ಆಸ್ರಣ್ಣ, ಕಟೀಲು ದೇವಳ ಆಡಳಿತಾಧಿಕಾರಿ ನಿಂಗಯ್ಯ, ಜಿಲ್ಲಾ ಪಂ. ಸದಸ್ಯ ಈಶ್ವರ ಕಟೀಲು, ತಾ.ಪಂ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾ.ಪಂ ಅಧ್ಯಕ್ಷ ಜನಾರ್ದನ ಕಿಲೆಂಜೂರು, ಬಜಪೆ ಸ್ವಯಂಭೂಲಿಂಗೇಶ್ವರ ದೇವಳ ಆಡಳಿತ ಮೊಕ್ತೇಸರ ಎಲ್.ವಿ.ಅಮೀನ್ ಮುಂಬೈ, ಉದ್ಯಮಿಗಳಾದ ಬಿ. ಟಿ. ಬಂಗೇರ, ಕೃಷ್ಣ ಭಟ್ ತಿರುಪತಿ, ಸಂತೋಷ್ ಕುಮಾರ್ ಶೆಟ್ಟಿ, ಯದುನಾರಾಯಣ ಶೆಟ್ಟಿ, ಎಮ್. ಗಫೂರ್, ಕಟೀಲು ದೇವಳ ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅನಂತಪದ್ಮನಾಭ ಆಸ್ರಣ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಹರಿನಾರಾಯಣದಾಸ ಆಸ್ರಣ್ಣ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟರಮಣ ಹೆಗ್ಡೆ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಧುಕರ ಅಮೀನ್, ಕಟೀಲು ದೇವಳ ಪದವಿ ಕಾಲೇಜು ಪ್ರಿನ್ಸ್‌ಪಾಲ್ ಎಮ್. ಬಾಲಕೃಷ್ಣ ಶೆಟ್ಟಿ, ಕಟೀಲು ದೇವಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಾಸುದೇವ ಶೆಣೈ ಉಪಸ್ಥಿತರಿದ್ದರು.
ಕಟೀಲು ದೇವಳ ಪದವಿ ಪೂರ್ವ ಕಾಲೇಜು ಪ್ರಾಚಾರ‍್ಯ ಜಯರಾಮ ಪೂಂಜಾ ಸ್ವಾಗತಿಸಿದರು, ಕಟೀಲು ದೇವಳ ಪ್ರೌಢ ಶಾಲಾ ಉಪಪ್ರಾಚಾರ‍್ಯ ಕೆ.ವಿ.ಶೆಟ್ಟಿ ಪ್ರಸ್ತಾವನೆಗೈದರು. ಪ್ರೌಢ ಶಾಲಾ ಶಿಕ್ಷಕರಾದ ಸಾಯಿನಾಥ ಶೆಟ್ಟಿ ಮತ್ತು ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ‍್ಯಕ್ರಮಗಳು ನಡೆದವು.



ಇಂದು(ತಾ.೨೮) ಕಟೀಲು ಪ್ರೌಢಶಾಲೆಯ ಸುವರ್ಣ ಮಹೋತ್ಸವ ನಡೆಯಲಿದೆ.

No comments:

Post a Comment