Thursday, January 1, 2015

ಕಟೀಲು ಪದವಿ ಕಾಲೇಜು ರಜತ ಮಹೋತ್ಸವ

ಕೇವಲ ಅಂಕಗಳು ಮಾತ್ರ ಮಾನದಂಡವಾಗಿರಬಾರದು - ವಿನಯ ಹೆಗ್ಡೆ
ಕಿನ್ನಿಗೋಳಿ : ದೇಶದ ಹೆಮ್ಮೆಯ ಸಂಸ್ಕೃತ ಭಾಷೆಯನ್ನು ಕಲಿಸುವ ಶಿಕ್ಷಣ ಸಂಸ್ಥೆಗಳು ಹೆಚ್ಚಾಗಬೇಕು. ಕಲಿಕೆಯಲ್ಲಿ ಅಂಕಗಳಷ್ಟೇ ಮಾನದಂಡವಾಗಿರದೆ ಎಲ್ಲ ವಿಚಾರಗಳಲ್ಲೂ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು ಎಂದು ನಿಟ್ಟೆ ವಿಶ್ವವಿದ್ಯಾಲಯ ಅಧ್ಯಕ್ಷ ವಿನಯ ಎಸ್. ಹೆಗ್ಡೆ ಹೇಳಿದರು.
ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಬೆಳ್ಳಿಹಬ್ಬ ಕಟ್ಟಡಕ್ಕೆ ಶಿಲಾನ್ಯಾಸ ಹಾಗೂ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಭಾಷಾ ಮಾಧ್ಯಮ ಹಾಗೂ ಅಂಕಗಳ ಬಗ್ಗೆ ಪೋಷಕರಲ್ಲಿ ಕೀಳರಿಮೆ ಸರಿಯಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಸಚಿವ ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ಹೇಳಿದರು.
ಕಲಿತ ವಿದ್ಯಾಲಯವನ್ನು ಮರೆಯದೆ ಬಂದು ಹೋಗುವ ಕರ್ತವ್ಯ ವಿದ್ಯಾರ್ಥಿಗಳದ್ದು ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ಮೊಕ್ತೇಸರ ವಾಸುದೇವ ಆಸ್ರಣ್ಣ, ಸಾಂಸದ ನಳಿನ್‌ಕುಮಾರ್ ಕಟೀಲು, ಕಟೀಲು ದೇವಳ ಆಡಳಿತಾಧಿಕಾರಿ ನಿಂಗಯ್ಯ, ಮುಂಬೈ ಉದ್ಯಮಿ ಎಕ್ಕಾರು ಕೃಷ್ಣ ಡಿ.ಶೆಟ್ಟಿ, ಕುಸುಮೋದರ ಶೆಟ್ಟಿ, ದ.ಕ. ಜಿಲ್ಲಾ ಪಂ. ಸದಸ್ಯ ಈಶ್ವರ ಕಟೀಲ್, ಮುಂಬೈ ತೀಯಾ ಸಮಾಜದ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಪದ್ಮಲತಾ ಉಪಸ್ಥಿತರಿದ್ದರು.
ಪ್ರಾಚಾರ‍್ಯ ಎಂ. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಕ್ಷೇಮಪಾಲನಾಧಿಕಾರಿ ಡಾ. ಕೃಷ್ಣ ಕಾಂಚನ್ ಹಾಗೂ ಸ್ನಾತಕೋತ್ತರ ಸಂಸ್ಕೃತ ಕಾಲೇಜು ಪ್ರಾಚಾರ‍್ಯ ಪದ್ಮನಾಭ ಮರಾಠೆ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕ ಎಂ. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.



No comments:

Post a Comment