Friday, January 2, 2015

ಕಟೀಲು: ಹಳೆ ವಿದ್ಯಾರ್ಥಿಗಳ ಸಂಗಮೋತ್ಸವ

ಕಲಿತ ವಿದ್ಯಾಲಯದ ಋಣ ದೊಡ್ಡದು - ಮೋಹನ ಆಳ್ವ
ಕಟೀಲು : ಕಲಿತ ಶಾಲೆ, ಸಮಾಜದ ಋಣವನ್ನು ಯಾವುದಾದರೊಂದು ವಿಧದಲ್ಲಿ ತೀರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಡಾ.ಮೋಹನ ಆಳ್ವ ಹೇಳಿದರು.
ಶುಕ್ರವಾರ ನಡೆದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ವಿದ್ಯಾಸಂಸ್ಥೆಗಳ ಹಳೆ ವಿದ್ಯಾರ್ಥಿಗಳ ಸಂಗಮೋತ್ಸವ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಸಂಮಾನಿಸಿ ಮಾತನಾಡಿದರು.
ಪ್ರೌಢಶಾಲೆಯಲ್ಲಿ ಸೇವೆಗೈದು ನಿವೃತ್ತರಾದ ಉಮೇಶ್ ರಾವ್ ಎಕ್ಕಾರು, ಕೇಶವ ಹೊಳ್ಳ, ಸುಂದರ ಪೂಜಾರಿ, ಕೊರ್ಗಿ ವೇಂಕಟೇಶ್ವರ ಉಪಾಧ್ಯಾಯ, ಸುರೇಶ್ ಭಟ್, ಸತೀಶ್ ಭಟ್, ಕೃಷ್ಣ ರಾವ್, ಸದಾನಂದ ಆಸ್ರಣ್ಣ, ಕೆ.ಆರ್.ಪ್ರಭು, ಸುಂದರ ಸೇರಿಗಾರ, ಜನಾರ್ದನ, ವಾಸು ಪೂಜಾರಿ ಮುಂತಾದವರನ್ನು ಕ್ರೀಡಾ ಸಾಧಕರನ್ನು ಸಂಮಾನಿಸಲಾಯಿತು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ ಮಾಡದೆ ಮೌಲ್ಯಾಧಾರಿತ ಶಿಕ್ಷಣವನ್ನು ಕಟೀಲಿನ ಶಾಲಾ ಕಾಲೇಜುಗಳು ನೀಡುತ್ತಿವೆ ಎಂದು ದಕ್ಷಿಣ ಕನ್ನಡ ಸಂಸದ  ನಳಿನ್ ಕುಮಾರ್ ಕಟೀಲು ಹೇಳಿದರು.
ಬಳ್ಳಾರಿ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ ಕಟೀಲಿನ ವಿದ್ಯಾ ಸಂಸ್ಥೆಗಳ ಕೊಡುಗೆ ಮಹತ್ತರವಾದುದು ಎಂದರು.
ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಕರ್ನಾಟಕ ಸರಕಾರದ ರಾಜ್ಯ ಸಂಪರ್ಕಾಧಿಕಾರಿ ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಉದ್ಯಮಿಗಳಾದ ಉದಯ ಕುಮಾರ್ ದುಬೈ, ಗಿರೀಶ್ ಶೆಟ್ಟಿ, ಸಂದೇಶ್ ಕುಮಾರ್ ಶೆಟ್ಟಿ, ಆದರ್ಶ ಶೆಟ್ಟಿ ಎಕ್ಕಾರು, ದಿವಾಕರ, ಕೇಶವ ಕಟೀಲು, ಆನಂದ ಶೆಟ್ಟಿ ಎಕ್ಕಾರು, ಪ್ರದ್ಯುಮ್ನ ರಾವ್, ಜಿಲ್ಲಾ ಪಂ. ಸದಸ್ಯ ಈಶ್ವರ್ ಕಟೀಲ್,  ಕಟೀಲು ಪ್ರೌಢ ಶಾಲಾ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಧುಕರ ಅಮೀನ್, ಸುಬ್ರಹ್ಮಣ್ಯ ಪ್ರಸಾದ್, ಪ.ಪೂ. ಕಾಲೇಜು ಪ್ರಾಚಾರ‍್ಯರಾದ ಎಂ. ಬಾಲಕೃಷ್ಣ ಶೆಟ್ಟಿ, ಜಯರಾಮ ಪೂಂಜಾ, ಉಪಪ್ರಾಚಾರ‍್ಯ ಕೆ.ವಿ.ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವನಮಾಲ, ಮತ್ತಿತರರು  ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಹರಿನಾರಾಯಣ ಆಸ್ರಣ್ಣ ಸ್ವಾಗತಿಸಿದರು. ಸಾಯಿನಾಥ ಶೆಟ್ಟಿ ಮತ್ತು ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment