Monday, January 17, 2011

ಕಾರ್ತಿಕ್ ಶೆಟ್ಟಿ ಭೇಟಿ


ಕಟೀಲು ದೇಗುಲಕ್ಕೆ ಜನವರಿ 17ರಂದು ಯುವ ಚಿತ್ರ ನಟ ಕಾರ್ತಿಕ್ ಶೆಟ್ಟಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Saturday, January 8, 2011

ಕಟೀಲು ರಂಗಸ್ಥಳವೇರಿದ ವಾಟಾಳ್ ನಾಗರಾಜ್!







ಕಟೀಲು : ಕನ್ನಡ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜ್ ಶುಕ್ರವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ರಂಗಪೂಜೆ ಸೇವೆಯನ್ನು ಮಾಡಿದರು. ತಿಂಗಳ ಹಿಂದೆ ಕಟೀಲು ದೇಗುಲಕ್ಕೆ ಬಂದಿದ್ದಾಗ ಪೇರಣೆಗೊಂಡು ರಂಗಪೂಜೆ ಸೇವೆ ಮಾಡಿಸುವುದಾಗಿ ಹೇಳಿದ್ದ ವಾಟಾಳ್ ಶುಕ್ರವಾರ ಕ್ಷೇತ್ರಕ್ಕೆ ಆಗಮಿಸಿದ್ದರು. ಪೂಜೆಯ ಬಳಿಕ ರಥಬೀದಿಯಲ್ಲಿ ಹಾಕಿದ್ದ ರಂಗಸ್ಥಳದಲ್ಲಿ ಕಟೀಲು ಮೇಳದ ಯಕ್ಷಗಾನ ಆರಂಭವಾಗುತ್ತಿದ್ದಂತೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಬಲಿಪ ನಾರಾಯಣ ಭಾಗವತರನ್ನು ಅಭಿನಂದಿಸಿದರು ಕಪ್ಪಗಿನ ಕನ್ನಡಕ, ಟೊಪ್ಪಿ ಹಾಕಿಕೊಂಡ ವಾಟಾಳ್. ವಿವಿಧ ವೇಷಗಳನ್ನು ಹಾಕಿಕೊಂಡು, ಚಿತ್ರವಿಚಿತ್ರ ಹೋರಾಟಗಳ ಮೂಲಕ ಸುದ್ದಿಯಾಗುತ್ತಿರುವ ವಾಟಾಳ್ ನಾಗರಾಜ್, ರಂಗಸ್ಥಳದೊಳಕ್ಕೆ ಹೋಗಿ ಹಿಮ್ಮೇಳದ ಕಲಾವಿದರನ್ನು ಕೈಕುಲುಕಿದರು. ಕೆಳಗಿಳಿಯುತ್ತಿದ್ದಂತೆ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು ಕೂಡ ವಾಟಾಳರನ್ನು ಅಭಿಮಾನದಿಂದ ಮಾತನಾಡಿಸಿದರು.

Wednesday, January 5, 2011

ಕಟೀಲು ಜಿ.ಪಂ, ತಾಪಂ. ಸದಸ್ಯರು

ಕಟೀಲು ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಗೆದ್ದ ಬಿಜೆಪಿ ಅಭ್ಯರ್ಥಿ ಈಶ್ವರ ಪೂಜಾರಿ ಮತ್ತು ಕಟೀಲು ತಾಲೂಕು ಪಂಚಾಯತ್ ಕ್ಷೇತ್ರದಿಂದ ಗೆದ್ದ ಅಭ್ಯರ್ಥಿ ಬೇಬಿ ಸುಂದರ ಕೋಟ್ಯಾನ್


Thursday, December 30, 2010

ಎನ್‌ಎಸ್‌ಎಸ್ ಸೇವೆಗೆ ಪ್ರೇರಣೆ-ಅನಂತ ಆಸ್ರಣ್ಣ




ರಾಷ್ಟ್ರೀಯ ಸೇವಾ ಯೋಜನೆ ಸಮಾಜ ಸೇವೆಯಲ್ಲಿ ತೊಡಗಲು ವಿದ್ಯಾರ್ಥಿ ದೆಸೆಯಲ್ಲಿಯೇ ಯುವಕರನ್ನು ಪ್ರೇರೇಪಿಸುತ್ತಿದೆ ಎಂದು ಕಟೀಲು ದೇಗುಲದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದರು.ಅವರು ಗುರುವಾರ ಉಲ್ಲಂಜೆ ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ಬಲ್ಮಠ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಹರಿಪ್ರಸಾದ ಶೆಟ್ಟಿ, ರಥಬೀದಿ ಸರಕಾರಿ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಶೇಷಪ್ಪ, ಕಟೀಲು ಕಾಲೇಜಿನ ಸುರೇಶ್ ಶೆಟ್ಟಿ, ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಶೈಲಾ ಶೆಟ್ಟಿ, ಸಾಮಾಜಿಕ ಮುಖಂಡ ಭುವನಾಭಿರಾಮ ಉಡುಪ, ಶಿಕ್ಷಕಿ ಜೆಸಿಂತಾ ಡಿಸೋಜ,, ಶಾಲಾಭಿವೃದ್ಧಿ ಸಮಿತಿಯ ದಯಾನಂದ ಶೆಟ್ಟಿ, ಶರ್ಮಿಳಾ, ಎನ್‌ಎಸ್‌ಎಸ್ ಘಟಕದ ಕೀರ್ತನ್, ಯಶ್ವಿತಾ, ಹರಿಪ್ರಸಾದ, ದೇವಿಕಾ ಮತ್ತಿತರರಿದ್ದರು. ಕಿನ್ನಿಗೋಳಿ ರೋಟರ‍್ಯಾಕ್ಟ್ ವತಿಯಿಂದ ೮೦ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡಗಳನ್ನು ಕ್ಲಬ್‌ನ ಪ್ರಕಾಶ್ ಆಚಾರ್ ವಿತರಿಸಿದರು. ಯೋಜನಾಧಿಕಾರಿ ಕೇಶವ ಎಚ್. ಸ್ವಾಗತಿಸಿದರು. ಕೃಷ್ಣ ಕೆ.ಕೆ.ವಂದಿಸಿದರು. ಘಟಕದ ವತಿಯಿಂದ ಶಾಲೆಗೆ ಗೋಡೆಗಡಿಯಾರ ನೀಡಲಾಯಿತು.

Friday, December 24, 2010

ಉಲ್ಲಂಜೆಯಲ್ಲಿ ಎನ್‌ಎಸ್‌ಎಸ್ ಶಿಬಿರ ಆರಂಭ


ವಿದ್ಯಾರ್ಥಿ ಜೀವನದಲ್ಲಿ ಪಾಠ ಪ್ರವಚನಗಳ ಜೊತೆಗೆ ಬದುಕಿನ ಪಾಠವನ್ನು ಕಲಿಸಲು ಎನ್‌ಎಸ್‌ಎಸ್ ಚಟುವಟಿಕೆ ಪೂರಕ ಎಂದು ಕಟೀಲು ದೇಗುಲದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಹೇಳಿದರು.
ಅವರು ಶುಕ್ರವಾರ(ಡಿ೨೪) ಉಲ್ಲಂಜೆ ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಮೆನ್ನಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಜನಾರ್ದನ ಕಿಲೆಂಜೂರು, ಪತ್ರಕರ್ತ ರಘುನಾಥ ಕಾಮತ್ ಕೆಂಚನಕೆರೆ, ಉಪನ್ಯಾಸಕ ಸುರೇಶ್, ಶಿಕ್ಷಕ ಕೆ.ವಿ.ಶೆಟ್ಟಿ, ಉಲ್ಲಂಜೆ ಶಾಲೆಯ ಮುಖ್ಯ ಶಿಕ್ಷಕಿ ಮಂಗಳಾ ಎಸ್.ಭಟ್, ಶಾಲಾಭಿವೃದ್ಧಿ ಸಮಿತಿಯ ದಯಾನಂದ ಶೆಟ್ಟಿ ಮತ್ತಿತರರಿದ್ದರು. ಯೋಜನಾಧಿಕಾರಿ ಕೇಶವ ಎಚ್.ಸ್ವಾಗತಿಸಿದರು. ಡಾ.ಕೃಷ್ಣ ವಂದಿಸಿದರು. ಯಶ್ವಿತಾ ನಿರೂಪಿಸಿದರು. ಶಿಬಿರ ತಾ.೩೦ರವರೆಗೆ ನಡೆಯಲಿದೆ.

Thursday, December 23, 2010

ಉಲ್ಲಂಜೆಯಲ್ಲಿ ಕಟೀಲು ಕಾಲೇಜು ಎನ್‌ಎಸ್‌ಎಸ್ ಶಿಬಿರ

ಉಲ್ಲಂಜೆ ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ತಾ.೨೪ರಿಂದ ತಾ.೩೦ರವರೆಗೆ ಕಟೀಲು ಶ್ರೀ ದು.ಪ.ದೇ.ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ವಾರ್ಷಿಕ ಶಿಬಿರ ನಡೆಯಲಿದೆ.ಸ್ಥಳೀಯ ರಸ್ತೆಗಳ ರಿಪೇರಿ, ಶೌಚಾಲಯಗಳ ನಿರ್ಮಾಣ ಮುಂತಾದ ಕಾರ್‍ಯಕ್ರಮಗಳನ್ನು ಶಿಬಿರದಲ್ಲಿ ಆಯೋಜಿಸಲಾಗಿದೆ ಎಂದು ಯೋಜನಾಧಿಕಾರಿ ಕೇಶವ ಎಚ್. ತಿಳಿಸಿದ್ದಾರೆ.

Tuesday, December 21, 2010

ಶಿಬರೂರು ಕೋಲ










ಶಿಬರೂರು ಕೊಡಮಣಿತ್ತಾಯ ದೈವಸ್ಥಾನದಲ್ಲಿ ನೇಮ ನಡೆಯಿತು



Saturday, December 18, 2010

ನಿಡ್ಡೋಡಿ ಐಟಿಐನಲ್ಲಿ ಗ್ರಾಮೋತ್ಸವ

ಅತ್ಯಂತ ಜ್ಞಾನಿಗಳೂ, ಬರೆಯಲೂ ಓದಲೂ ಬಾರದ ಅನಕ್ಷಸ್ಥರು, ಅತ್ಯಂತ ಶ್ರೀಮಂತರೂ, ಕಡು ಬಡವರೂ, ಆರೋಗ್ಯವಂತರೂ, ಕಾಯಿಲೆಗಳಿಂದ ನರಳುವವರೂ ಹೀಗೆ ಜನರ ಮಧ್ಯೆ ದೊಡ್ಡದಾದ ಅಂತರವನ್ನು ನಮ್ಮ ದೇಶದಲ್ಲಿ ಕಾಣಬಹುದು. ಸ್ವಾತಂತ್ರ್ಯಾನಂತರ ಸಮಾನತೆಯ ಸಮಾಜದ ಸ್ಥಾಪನೆಗಾಗಿ ಕೇಂದ್ರ ರಾಜ್ಯ ಸರಕಾರಗಳು ಅದೆಷ್ಟು ಪ್ರಯತ್ನ ಪಟ್ಟರೂ ಯಶಸ್ಸು ಸಾಧ್ಯವಾಗುತ್ತಿಲ್ಲ. ಪ್ರತಿ ಗ್ರಾಮವನ್ನು ಆದರ್ಶವಾಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸಾಗಿದಾಗ ದೇಶ ಬಲಿಷ್ಟವಾಗಬಲ್ಲದು ಎಂದು ಮೂಡುಬಿದ್ರೆಯ ಡಾ.ಮೋಹನ ಆಳ್ವ ಹೇಳಿದರು.ಅವರು ಶನಿವಾರ ರಾತ್ರಿ ನಿಡ್ಡೋಡಿಯಲ್ಲಿ ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಶ್ರೀ ದುರ್ಗಾದೇವಿ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ನಿಡ್ಡೋಡಿ ಗ್ರಾಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಗ್ರಾಮೋತ್ಸವದ ಬಗ್ಗೆ ಉಪನ್ಯಾಸಗೈದ ಗಣೇಶ್ ಅಮೀನ್ ಸಂಕಮಾರ್, ನಮ್ಮ ಮಣ್ಣಿನ ಪ್ರೀತಿ, ಅಭಿಮಾನಗಳನ್ನು ಜಾನಪದ ಸಂಸ್ಕೃತಿ ನಮಗೆ ಕಲಿಸಿಕೊಡುತ್ತದೆ ಎಂದರು.ಸಾಂಸದ ನಳಿನ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಕ್ಷಣದೊಂದಿಗೆ ರಾಷ್ಟ್ರಪ್ರೇಮವನ್ನು ಹೆಚ್ಚಿಸುವ ಬಗ್ಗೆ ಶಿಕ್ಷಕರು ಹೆಚ್ಚು ಆಸಕ್ತಿ ವಹಿಸಬೇಕೆಂದರು.ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಎಂ.ಆರ್.ಜೈನ್, ತೋಕೂರು ಐಟಿಐನ ವೈ.ಎನ್.ಸಾಲ್ಯಾನ್, ವೇಣೂರು ಐಟಿಐನ ಸದಾನಂದ ಪೂಜಾರಿ ಮತ್ತಿತರರಿದ್ದರು.ಸಂಸ್ಥೆಯ ಅಧ್ಯಕ್ಷ ಭಾಸ್ಕರ ದೇವಸ್ಯ ಸ್ವಾಗತಿಸಿದರು. ಐಟಿಐನ ಪ್ರಾಚಾರ‍್ಯೆ ಅನುರಾಧಾ ಎಸ್.ಸಾಲ್ಯಾನ್ ವರದಿ ವಾಚಿಸಿದರು. ಸಂಸ್ಥೆಯ ವಿದ್ಯಾರ್ಥಿಗಳಿಂದ, ನಿಡ್ಡೋಡಿ ಗ್ರಾಮದ ಪ್ರತಿಭಾವಂತರಿಂದ ಸಾಂಸ್ಕೃತಿಕ, ಜಾನಪದ ಕಾರ‍್ಯಕ್ರಮಗಳು ನಡೆದವು.

Saturday, December 11, 2010

ಭಜನಾ ಮಂಗಲೋತ್ಸವ

ಕಟೀಲು ದೇಗುಲದಲ್ಲಿ ದಶಕಗಳಿಂದ ನಡೆಯುತ್ತ ಬಂದಿರುವ ಭಜನಾ ಮಂಗಲೋತ್ಸವ ನಡೆಯಿತು.

Friday, December 10, 2010

ಗಿಡಿಗೆರೆ ದೈವಸ್ಥಾನಕ್ಕೆ ಶಿಲಾನ್ಯಾಸ

ಕಟೀಲು ಗಿಡಿಗೆರೆ ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನಕ್ಕೆ ಶುಕ್ರವಾರ ಶಿಲಾನ್ಯಾಸ ಮಾಡಲಾಯಿತು. ಶಿಬರೂರು ಹಯಗ್ರೀವ ತಂತ್ರಿ, ಕಟೀಲು ಹರಿನಾರಾಯಣದಾಸ ಆಸ್ರಣ್ಣ, ಪಂಜ ವಾಸುದೇವ ಭಟ್ ಧಾರ್ಮಿಕ ವಿಧಿಗಳ ಮೂಲಕ ಶಿಲಾನ್ಯಾಸಗೈದರು.ಸಚಿವ ವಿ.ಎಸ್.ಆಚಾರ್‍ಯ, ಸಾಂಸದ ನಳಿನ್ ಕುಮಾರ್, ಶಾಸಕ ಅಭಯಚಂದ್ರ, ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಕಟೀಲು ಚರ್ಚ್‌ನ ಫಾ.ರಾಬರ್ಟ್ ಕ್ರಾಸ್ತಾ, ಮಾಜಿ ಶಾಸಕ ಸೋಮಪ್ಪ ಸುವರ್ಣ, ಜಿ.ಪಂ.ಸದಸ್ಯರಾದ ಶೈಲಾ ಸಿಕ್ವೇರ, ಪ್ರಮೋದ್ ಕುಮಾರ್, ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ರವಿಶಂಕರ ಶೆಟ್ಟಿ, ಎಂಆರ್‌ಪಿಎಲ್‌ನ ಲಕ್ಷ್ಮೀ ಕುಮಾರನ್, ಎಕ್ಕಾರು ಮೋನಪ್ಪ ಶೆಟ್ಟಿ, ಸುಭಾಶ್ಚಂದ್ರ ಪಡಿವಾಳ್, ಗಿರೀಶ್ ಶೆಟ್ಟಿ, ಸೀತಾರಾಮ ಕೊಂಚಾಡಿ, ಲೀಲಾಧರ ಶೆಟ್ಟಿ, ತಿಮ್ಮಪ್ಪ ಮೇಸ್ತ್ರಿ ಮತ್ತಿತರರಿದ್ದರು. ಅರುಣಾ ಕುಮಾರಿ ಪ್ರಾರ್ಥಿಸಿದರು. ಪುರುಷೋತ್ತಮ ಶೆಟ್ಟಿ ಸ್ವಾಗತಿಸಿದರು. ರುಕ್ಮಯ, ಕಿರಣ್ ಪಕ್ಕಳ ಕಾರ್‍ಯಕ್ರಮ ನಿರೂಪಿಸಿದರು.