Tuesday, January 27, 2015
ಸಂಮಾನ
ಕಟೀಲು ಮಲ್ಲಿಗೆಅಂಗಡಿ ಭ್ರಾಮರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ನಡೆದ ಯಕ್ಷಗಾನ ಸಂದರ್ಭ ಬಪ್ಪನಾಡು ಯಕ್ಷಗಾನ ಮೇಳದ ಕಲಾವಿದರಾದ ಸುಂದರ ಬಂಗಾಡಿ, ರಾಧಾಕೃಷ್ಣ ನಾವಡರನ್ನು ಸಂಮಾನಿಸಲಾಯಿತು. ಈ ಸಂದರ್ಭ ಕಟೀಲಿನ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಶೀಹರಿನಾರಾಯಣದಾಸ ಆಸ್ರಣ್ಣ, ಉದ್ಯಮಿಗಳಾದ ಪಯ್ಯೊಟ್ಟು ಸದಾಶಿವ ಸಾಲ್ಯಾನ್, ಧನಂಜಯ ಮಟ್ಟು, ಕೇಶವ ಕಟೀಲು, ತಿಮ್ಮಪ್ಪ ಕೋಟ್ಯಾನ್, ನವೀನ್ಕುಮಾರ್ ಕಟೀಲು, ಶಶೀಂದ್ರ ಅಮೀನ್, ಬಪ್ಪನಾಡು ಮೇಳದ ವಿನೋದ್ ಕುಮಾರ್, ಗೀತಾ ಸನಿಲ್, ಭ್ರಾಮರೀ ಫ್ರೆಂಡ್ಸ್ನ ಗಣೇಶ್ ಆಚಾರ್ಯ, ದುರ್ಗಾಪ್ರಸಾದ್ ಶೆಟ್ಟಿ ಮತ್ತಿತರರಿದ್ದರು.
Sunday, January 25, 2015
Friday, January 9, 2015
ಕಟೀಲಿನಲ್ಲಿ ಯಕ್ಷಗಾನ ಬಯಲಾಟ ರಂಗಸಂಭ್ರಮ ಆರಂಭ
ಯಕ್ಷಗಾನ ಸಕಾಲಿಕ ಸಾರ್ವಕಾಲಿಕವಾಗಿರಲಿ - ಡಾ. ಚಿನ್ನಪ್ಪ ಗೌಡ
ಕಟೀಲು : ಕಾಲದ ಒತ್ತಡವನ್ನು ನಿಭಾಯಿಸಿಕೊಂಡು ಯಕ್ಷಗಾನವನ್ನು ಸಕಾಲಿಕವಾಗಿ ಸಾರ್ವಕಾಲಿಕವಾಗಿಸಬೇಕು. ಯಕ್ಷಗಾನಕ್ಕೆ ಒಪ್ಪುವ ಹಾಗೆ ಬದಲಾವಣೆ ಅಗತ್ಯವಿದೆ ಎಂದು ಮಂಗಳೂರು ವಿವಿಯ ಡಾ. ಚಿನ್ನಪ್ಪ ಗೌಡ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಸರಸ್ವತೀ ಸದನದಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡಮಿಯ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ ಯಕ್ಷಗಾನ ಬಯಲಾಟ ರಂಗಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಕಾಡಮಿ ಅಧ್ಯಕ್ಷ ನಾಡೋಜ ಬೆಳಗಲ್ಲು ವೀರಣ್ಣ ಮಾತನಾಡಿ ಎರಡು ಮೂರು ಜಿಲ್ಲೆಗಳಲ್ಲಿ ಹುಟ್ಟಿಕೊಂಡ ಯಕ್ಷಗಾನ ಇವತ್ತು ವಿಶ್ವವ್ಯಾಪಿಯಾಗಿದೆ. ಇಲ್ಲಿನ ವೀರಪ್ಪ ಮೊಯ್ಲಿಯಂತಹವರೂ ತಾನು ಯಕ್ಷಗಾನಕ್ಕೆ ಗೆಜ್ಜೆ ಕಟ್ಟಿದ್ದೇನೆ ಎಂದು ಹೆಮ್ಮೆ ಪಡುತ್ತಾರೆ. ಆದರೆ ಉತ್ತರಕರ್ನಾಟಕದಲ್ಲಿ ರಾಜಕೀಯ ಹಾಗೂ ಜನರ ಅಸಡ್ಡೆಯ ಕಾರಣದಿಂದ ಮೂಡಲಪಾಯ, ದೊಡ್ಡಾಟ, ಸಣ್ಣಾಟದಂತಹ ಪ್ರಕಾರಗಳು ಬೆಳವಣಿಗೆ ಕಂಡಿಲ್ಲ ಎಂದು ವಿಷಾದಿಸಿದರು.
ಆಶಯ ಭಾಷಣ ಮಾಡಿದ ಅಕಾಡಮಿ ಸದಸ್ಯ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಯಕ್ಷಗಾನ ರಂಗಪ್ರಾಕಾರವನ್ನು ಇನ್ನಷ್ಟು ಪ್ರೋತ್ಸಾಹಿಸುವ ಹಿನ್ನಲೆಯಲ್ಲಿರಾಜ್ಯಾದ್ಯಂತ ೧೬ಕಡೆಗಳಲ್ಲಿ ರಂಗಸಂಭ್ರಮವನ್ನು ನಡೆಸುತ್ತಿದ್ದೇವೆ ಎಂದರು.
ಕಟೀಲು ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ಕಸಾಪದ ಹರಿಕೃಷ್ಣ ಪುನರೂರು, ಪ್ರದೀಪಕುಮಾರ ಕಲ್ಕೂರ, ಶ್ರೀಮತಿ ಗೋಪಿಕಾ ಮಯ್ಯ, ರಮೇಶ್ ಭಟ್, ವಾಸುದೇವ ಶೆಣೈ ಮತ್ತಿತರರಿದ್ದರು.
ಅಕಾಡಮಿ ರಿಜಿಸ್ಟ್ರಾರ್ ಡಿ.ಆರ್.ಮೈಥಿಲಿ ಸ್ವಾಗತಿಸಿದರು. ಸದಸ್ಯ ತಾರಾನಾಥ ವರ್ಕಾಡಿ ವಂದಿಸಿದರು. ಸುಮಂಗಲಾ ರತ್ನಾಕರ್ ರಾವ್ ಕಾರ್ಯಕ್ರಮ ನಿರೂಪಿಸಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ಶ್ರೀ ದುರ್ಗಾ ಮಕ್ಕಳ ಮೇಳದ ಸಹಯೋಗದಲ್ಲಿ ಈ ರಂಗ ಸಂಭ್ರಮ ನಡೆಯುತ್ತಿದೆ.
ಶುಕ್ರವಾರ ದುರ್ಗಾ ಮಕ್ಕಳ ಮೇಳದವರಿಂದ ಯಕ್ಷಗಾನ ಪಂಚವಟಿ, ಬೆಳಗಾವಿ ಅಥಣಿಯ ವೀರಭದ್ರೇಶ್ವರ ತಂಡದಿಂದ ಶ್ರೀ ಕೃಷ್ಣ ಪಾರಿಜಾತ, ಶಿವಮೊಗ್ಗ ಶ್ರೀ ಸಾಯಿ ಕಲಾ ಪ್ರತಿಷ್ಟಾನದಿಂದ ಬಡಗುತಿಟ್ಟು ಯಕ್ಷಗಾನ ದಕ್ಷಯಜ್ಞ ಪ್ರದರ್ಶನಗೊಂಡಿತು.
ಮಕ್ಕಳ ಯಕ್ಷಗಾನ ವಿಚಾರಗೋಷ್ಟಿ
ಮಕ್ಕಳಲ್ಲಿ ಯಕ್ಷಗಾನದ ಆಸಕ್ತಿ ಮೂಡಿಸಿದರೆ ಅವರಲ್ಲಿ ಪುರಾಣ ಕಥೆಗಳ ವಿಚಾರ ತಿಳಿದು ಸಂಸ್ಕಾರ ತಿಳಿಯುತ್ತದೆ. ಆದರೆ ಯಕ್ಷಗಾನ ಕಲಿಕೆಯ ಉದ್ದೇಶವಿಟ್ಟುಕೊಂಡು ಮಕ್ಕಳಲ್ಲಿ ಹಣದ ಆಸೆ, ಪ್ರಶಸ್ತಿಯ ಆಮಿಷ ಒಡ್ಡಬಾರದು ಎಂದು ಕಟೀಲು ದುರ್ಗಾಮಕ್ಕಳ ಮೇಳದ ಅಧ್ಯಕ್ಷ ಶ್ರೀಹರಿನಾರಾಯಣದಾಸ ಆಸ್ರಣ್ಣ ಹೇಳಿದರು.
ಅವರು ರಂಗಸಂಭ್ರಮದಲ್ಲಿ ಕಲಾ ಸಂರಕ್ಷಣೆಯಲ್ಲಿ ಮಕ್ಕಳ ಮೇಳದ ಪಾತ್ರದ ಕುರಿತು ಉಪನ್ಯಾಸ ನೀಡಿದರು.
ಖ್ಯಾತ ಕಲಾವಿದ ಕೆ.ಗೋವಿಂದ ಭಟ್ ಮಕ್ಕಳಲ್ಲಿ ಯಕ್ಷಗಾನ ಆಸಕ್ತಿ ಬೆಳೆಸಲು ಹೆತ್ತವರ, ಶಾಲೆಗಳ ಪಾತ್ರ ಪ್ರಮುಖವಾದುದು ಎಂದರು.
ಮಕ್ಕಳ ಮೇಳದ ಹೆಜ್ಜೆ ಗುರುತುಗಳು ಕುರಿತು ಡಾ.ದಿನಕರ ಪಚ್ಚನಾಡಿ ಉಪನ್ಯಾಸ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಎಂ.ಆರ್. ವಾಸುದೇವ ಸಾಮಗ ಮಾತನಾಡಿ ಶಿಕ್ಷಣದಂತೆ ಯಕ್ಷಗಾನವೂ ವ್ಯಾಪಾರೀಕರಣವಾಗಿದೆ. ಮಕ್ಕಳಲ್ಲಿ ಯಕ್ಷಗಾನ ವೇಷ ಹಾಕಿಸುವುದಷ್ಟೇ ಅಲ್ಲ, ಅಧ್ಯಯನ ಮಾಡಿಸಬೇಕು ಎಂದರು.
ಪಾತಾಳ ವೆಂಕಟರಮಣ ಭಟ್, ಡಾ.ಶ್ರೀಧರ ಭಂಡಾರಿ, ಕರ್ಗಲ್ಲು ವಿಶ್ವೇಶ್ವರ ಭಟ್, ದೇವಾನಂದ ಭಟ್ ಬೆಳುವಾಯಿ, ಗಿರೀಶ ನಾವಡ, ಮಹಾಬಲೇಶ್ವರ ಆಚಾರ್ಯ ಚರ್ಚೆಯಲ್ಲಿ ಭಾಗವಹಿಸಿದ್ದರು. ಗಾಯತ್ರೀ ಎಸ್ ಉಡುಪ ಕಾರ್ಯಕ್ರಮ ನಿರೂಪಿಸಿದರು.
ಇಂದು(೧೦) ಹವ್ಯಾಸಿ ಯಕ್ಷಗಾನ, ಮೂಡಲಪಾಯ, ಸಣ್ಣಾಟ, ಸೂತ್ರದ ಬೊಂಬೆಯಾಟ, ಎಲ್ಸಿಡಿ ಪ್ರದರ್ಶನ ಹಾಗೂ ವಿಚಾರಗೋಷ್ಟಿಗಳಿವೆ.
Tuesday, January 6, 2015
ಜ.೯-೧೧ : ಕಟೀಲಿನಲ್ಲಿ ಯಕ್ಷಗಾನ ಬಯಲಾಟ ಸಂಭ್ರಮ
ಮಕ್ಕಳ, ಹವ್ಯಾಸಿ, ಮಹಿಳಾ ಯಕ್ಷಗಾನ ಬಗ್ಗೆ ವಿಚಾರಗೋಷ್ಟಿ.
ಮೂರು ದಿನಗಳ ಸಂಭ್ರಮ
ತೆಂಕು ಬಡಗು ಮೂಡಲಪಾಯ ಯಕ್ಷಗಾನ, ಸಣ್ಣಾಟ, ಬೊಂಬೆಯಾಟ, ಸಂಗ್ಯಾಬಾಳ್ಯ ಪ್ರದರ್ಶನ
ಐವತ್ತಕ್ಕೂ ಹೆಚ್ಚು ವಿದ್ವಾಂಸರ ಉಪಸ್ಥಿತಿಯಲ್ಲಿ ೬ವಿಚಾರ ಗೋಷ್ಟಿಗಳು
ಕಟೀಲು : ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡಮಿಯ ಆಶ್ರಯದಲ್ಲಿ ಜನವರಿ ೯ರಿಂದ ೧೧ರತನಕ ಕಟೀಲಿನಲ್ಲಿ ಯಕ್ಷಗಾನ ಬಯಲಾಟ ಸಂಭ್ರಮ ನಡೆಯಲಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ಶ್ರೀ ದುರ್ಗಾ ಮಕ್ಕಳ ಮೇಳದ ಸಹಯೋಗದಲ್ಲಿ ನಡೆಯುವ ಮಕ್ಕಳ ಯಕ್ಷಗಾನ, ಮಹಿಳಾ ಯಕ್ಷಗಾನ, ಹವ್ಯಾಸಿ ಯಕ್ಷಗಾನದ ಪರಿಕಲ್ಪನೆಯ ಈ ಯಕ್ಷಗಾನ ಬಯಲಾಟ ಸಂಭ್ರಮವನ್ನು ಅಕಾಡಮಿ ಅಧ್ಯಕ್ಷ ನಾಡೋಜ ಬೆಳಗಲ್ಲು ವೀರಣ್ಣ, ವಾಸುದೇವ ಆಸ್ರಣ್ಣ, ಕಬ್ಬಿನಾಲೆ ವಸಂತ ಭಾರದ್ವಾಜ, ನಿಂಗಯ್ಯ, ಹರಿಕೃಷ್ಣ ಪುನರೂರು, ಪ್ರದೀಪ ಕಲ್ಕೂರ ಮುಂತಾದವರ ಉಪಸ್ಥಿತಿಯಲ್ಲಿ ಡಾ. ಚಿನ್ನಪ್ಪ ಗೌಡ ಉದ್ಘಾಟಿಸಲಿದ್ದಾರೆ.
ಅಂದು ದುರ್ಗಾ ಮಕ್ಕಳ ಮೇಳದವರಿಂದ ಯಕ್ಷಗಾನ ಪಂಚವಟಿ, ಬೆಳಗಾವಿ ಅಥಣಿಯ ವೀರಭದ್ರೇಶ್ವರ ತಂಡದಿಂದ ಶ್ರೀ ಕೃಷ್ಣ ಪಾರಿಜಾತ, ಶಿವಮೊಗ್ಗ ಶ್ರೀ ಸಾಯಿ ಕಲಾ ಪ್ರತಿಷ್ಟಾನದಿಂದ ಬಡಗುತಿಟ್ಟು ಯಕ್ಷಗಾನ ದಕ್ಷಯಜ್ಞ ನಡೆಯಲಿದೆ. ಅಂದು ಮಕ್ಕಳ ಮೇಳದ ಹೆಜ್ಜೆ ಗುರುತುಗಳು ಮತ್ತು ಕಲಾ ಸಂರಕ್ಷರಣೆಯಲ್ಲಿ ಮಕ್ಕಳ ಮೇಳದ ಪಾತ್ರ ಕುರಿತು ವಿಚಾರಗೋಷ್ಟಿ ನಡೆಯಲಿದ್ದು ಡಾ.ದಿನಕರ ಪಚ್ಚನಾಡಿ, ಶ್ರೀಹರಿನಾರಾಯಣದಾಸ ಆಸ್ರಣ್ಣ ಉಪನ್ಯಾಸ ನೀಡಲಿದ್ದಾರೆ. ವಾಸುದೇವ ಸಾಮಗ, ಗೋವಿಂದ ಭಟ್ ಮುಂತಾದ ತಜ್ಞರು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಕಾಡಮಿಯ ಸದಸ್ಯ ತಾರಾನಾಥ ವರ್ಕಾಡಿ ತಿಳಿಸಿದ್ದಾರೆ.
ತಾ. ೧೦ರಂದು ಬೆಳ್ಮಣ್ಣು ಯಕ್ಷಮಿತ್ರರಿಂದ ಹವ್ಯಾಸಿ ಯಕ್ಷಗಾನ ಸುದರ್ಶನ ವಿಜಯ, ಬೆಳಗಾಂ ಶ್ರೀ ಸದಾಶಿವ ಮಹಿಳೆಯರ ಸಣ್ಣಾಟ ಸಂಘ ಸಾಲಹಳ್ಳಿಯವರಿಂದ ಸಣ್ಣಾಟ ಸಂಗ್ಯಾ ಬಾಳ್ಯಾ, ತುಮಕೂರು ಬಸವೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಮೂಡಲಪಾಯ ಯಕ್ಷಗಾನ ಭಕ್ತ ಪ್ರಹ್ಲಾದ, ಮಂಡ್ಯ ನಾಗಮಂಗಲದ ಕಾಳಿಕಾಂಬಾ ಪ್ರಸನ್ನ ಯುವಜನ ಸೂತ್ರದ ಬೊಂಬೆಮೇಳದವರಿಂದ ಸೂತ್ರದ ಬೊಂಬೆಯಾಟ ಕನಕಾಂಗಿ ಕಲ್ಯಾಣ, ಕುಳಾಯಿ ಯಕ್ಷಮಂಜೂಷದವರಿಂದ ವಿಶ್ವವ್ಯಾಪಿ ಯಕ್ಷಗಾನದ ಅಪೂರ್ವ ಎಲ್ಸಿಡಿ ಪ್ರದರ್ಶನ ನಡೆಯಲಿದೆ.
ಅಂದು ಹರಕೆ ಆಟಗಳು ಕಲಾತ್ಮಕತೆ ಮತ್ತು ಕಲಾ ಸಂರಕ್ಷಣೆ ಹಾಗೂ ಹವ್ಯಾಸಿ ಯಕ್ಷಗಾನ ಸಾಧ್ಯತೆ ಮತ್ತು ಸಮಸ್ಯೆ ಬಗ್ಗೆ ವಿಚಾರಗೋಷ್ಟಿಯಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್, ಭಾಸ್ಕರ ರೈ ಕುಕ್ಕುವಳ್ಳಿ ಉಪನ್ಯಾಸ ನೀಡಲಿದ್ದು, ಕಮಲಾದೇವಿಪ್ರಸಾದ ಆಸ್ರಣ್ಣ, ಚಂದ್ರಶೇಖರ ದಾಮ್ಲೆ ಮುಂತಾದ ತಜ್ಞರು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.
ತಾ.೧೧ರಂದು ಮಹಿಳಾ ಯಕ್ಷಗಾನ ಉಗಮ ಮತ್ತು ವಿಕಾಸ ಹಾಗೂ ಮಹಿಳಾ ಮೇಳ ಕಲಾತ್ಮಕತೆ ಮತ್ತು ಕಲಾ ಪ್ರಸರಣದ ಬಗ್ಗೆ ಡಾ. ನಾಗವೇಣಿ ಮಂಚಿ, ವಿದ್ಯಾ ಕೋಳ್ಯೂರು ಉಪನ್ಯಾಸ ನೀಡಿಲಿದ್ದಾರೆ. ಲೀಲಾವತೀ ಬೈಪಾಡಿತ್ತಾಯ, ವಿದ್ಯಾ ರಮೇಶ್ ಭಟ್ ಮುಂತಾದ ಸಾಧಕ ಮಹಿಳೆಯರು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.
ಅಂದು ಪ್ರಸಿದ್ಧ ಕಲಾವಿದರಿಂದ ತಾಳಮದ್ದಲೆ ಕರ್ಣಾರ್ಜುನ, ಉಜಿರೆ ಬಿಂದು ಹವ್ಯಾಸಿ ಮಹಿಳಾ ತಂಡದಿಂದ ತೆಂಕುತಿಟ್ಟು ಯಕ್ಷಗಾನ ನರಕಾಸುರ ಮೋಕ್ಷ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಪ್ರಭಾಖರ ಜೋಷಿ ಶಿಖರೋಪನ್ಯಾಸ ನೀಡಲಿದ್ದು, ಸಚಿವ ಅಭಯಚಂದ್ರ, ನಳಿನ್ ಕುಮಾರ್, ಪಂಜ ಭಾಸ್ಕರ ಭಟ್, ಡಾ.ನಾರಾಯಣ ಶೆಟ್ಟಿ, ಎಂ.ಎಲ್.ಸಾಮಗ, ಕಿಶನ್ ಹೆಗ್ಡೆ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಮಕ್ಕಳ ಮೇಳದ ಶ್ರೀಹರಿನಾರಾಯಣದಾಸ ಆಸ್ರಣ್ಣ ತಿಳಿಸಿದ್ದಾರೆ.
Friday, January 2, 2015
ಕಟೀಲು: ಹಳೆ ವಿದ್ಯಾರ್ಥಿಗಳ ಸಂಗಮೋತ್ಸವ
ಕಲಿತ ವಿದ್ಯಾಲಯದ ಋಣ ದೊಡ್ಡದು - ಮೋಹನ ಆಳ್ವ
ಕಟೀಲು : ಕಲಿತ ಶಾಲೆ, ಸಮಾಜದ ಋಣವನ್ನು ಯಾವುದಾದರೊಂದು ವಿಧದಲ್ಲಿ ತೀರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಡಾ.ಮೋಹನ ಆಳ್ವ ಹೇಳಿದರು.
ಶುಕ್ರವಾರ ನಡೆದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ವಿದ್ಯಾಸಂಸ್ಥೆಗಳ ಹಳೆ ವಿದ್ಯಾರ್ಥಿಗಳ ಸಂಗಮೋತ್ಸವ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಸಂಮಾನಿಸಿ ಮಾತನಾಡಿದರು.
ಪ್ರೌಢಶಾಲೆಯಲ್ಲಿ ಸೇವೆಗೈದು ನಿವೃತ್ತರಾದ ಉಮೇಶ್ ರಾವ್ ಎಕ್ಕಾರು, ಕೇಶವ ಹೊಳ್ಳ, ಸುಂದರ ಪೂಜಾರಿ, ಕೊರ್ಗಿ ವೇಂಕಟೇಶ್ವರ ಉಪಾಧ್ಯಾಯ, ಸುರೇಶ್ ಭಟ್, ಸತೀಶ್ ಭಟ್, ಕೃಷ್ಣ ರಾವ್, ಸದಾನಂದ ಆಸ್ರಣ್ಣ, ಕೆ.ಆರ್.ಪ್ರಭು, ಸುಂದರ ಸೇರಿಗಾರ, ಜನಾರ್ದನ, ವಾಸು ಪೂಜಾರಿ ಮುಂತಾದವರನ್ನು ಕ್ರೀಡಾ ಸಾಧಕರನ್ನು ಸಂಮಾನಿಸಲಾಯಿತು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ ಮಾಡದೆ ಮೌಲ್ಯಾಧಾರಿತ ಶಿಕ್ಷಣವನ್ನು ಕಟೀಲಿನ ಶಾಲಾ ಕಾಲೇಜುಗಳು ನೀಡುತ್ತಿವೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಬಳ್ಳಾರಿ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ ಕಟೀಲಿನ ವಿದ್ಯಾ ಸಂಸ್ಥೆಗಳ ಕೊಡುಗೆ ಮಹತ್ತರವಾದುದು ಎಂದರು.
ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಕರ್ನಾಟಕ ಸರಕಾರದ ರಾಜ್ಯ ಸಂಪರ್ಕಾಧಿಕಾರಿ ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಉದ್ಯಮಿಗಳಾದ ಉದಯ ಕುಮಾರ್ ದುಬೈ, ಗಿರೀಶ್ ಶೆಟ್ಟಿ, ಸಂದೇಶ್ ಕುಮಾರ್ ಶೆಟ್ಟಿ, ಆದರ್ಶ ಶೆಟ್ಟಿ ಎಕ್ಕಾರು, ದಿವಾಕರ, ಕೇಶವ ಕಟೀಲು, ಆನಂದ ಶೆಟ್ಟಿ ಎಕ್ಕಾರು, ಪ್ರದ್ಯುಮ್ನ ರಾವ್, ಜಿಲ್ಲಾ ಪಂ. ಸದಸ್ಯ ಈಶ್ವರ್ ಕಟೀಲ್, ಕಟೀಲು ಪ್ರೌಢ ಶಾಲಾ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಧುಕರ ಅಮೀನ್, ಸುಬ್ರಹ್ಮಣ್ಯ ಪ್ರಸಾದ್, ಪ.ಪೂ. ಕಾಲೇಜು ಪ್ರಾಚಾರ್ಯರಾದ ಎಂ. ಬಾಲಕೃಷ್ಣ ಶೆಟ್ಟಿ, ಜಯರಾಮ ಪೂಂಜಾ, ಉಪಪ್ರಾಚಾರ್ಯ ಕೆ.ವಿ.ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವನಮಾಲ, ಮತ್ತಿತರರು ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಹರಿನಾರಾಯಣ ಆಸ್ರಣ್ಣ ಸ್ವಾಗತಿಸಿದರು. ಸಾಯಿನಾಥ ಶೆಟ್ಟಿ ಮತ್ತು ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.
ಕಟೀಲು : ಕಲಿತ ಶಾಲೆ, ಸಮಾಜದ ಋಣವನ್ನು ಯಾವುದಾದರೊಂದು ವಿಧದಲ್ಲಿ ತೀರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಡಾ.ಮೋಹನ ಆಳ್ವ ಹೇಳಿದರು.
ಶುಕ್ರವಾರ ನಡೆದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ವಿದ್ಯಾಸಂಸ್ಥೆಗಳ ಹಳೆ ವಿದ್ಯಾರ್ಥಿಗಳ ಸಂಗಮೋತ್ಸವ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಸಂಮಾನಿಸಿ ಮಾತನಾಡಿದರು.
ಪ್ರೌಢಶಾಲೆಯಲ್ಲಿ ಸೇವೆಗೈದು ನಿವೃತ್ತರಾದ ಉಮೇಶ್ ರಾವ್ ಎಕ್ಕಾರು, ಕೇಶವ ಹೊಳ್ಳ, ಸುಂದರ ಪೂಜಾರಿ, ಕೊರ್ಗಿ ವೇಂಕಟೇಶ್ವರ ಉಪಾಧ್ಯಾಯ, ಸುರೇಶ್ ಭಟ್, ಸತೀಶ್ ಭಟ್, ಕೃಷ್ಣ ರಾವ್, ಸದಾನಂದ ಆಸ್ರಣ್ಣ, ಕೆ.ಆರ್.ಪ್ರಭು, ಸುಂದರ ಸೇರಿಗಾರ, ಜನಾರ್ದನ, ವಾಸು ಪೂಜಾರಿ ಮುಂತಾದವರನ್ನು ಕ್ರೀಡಾ ಸಾಧಕರನ್ನು ಸಂಮಾನಿಸಲಾಯಿತು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ ಮಾಡದೆ ಮೌಲ್ಯಾಧಾರಿತ ಶಿಕ್ಷಣವನ್ನು ಕಟೀಲಿನ ಶಾಲಾ ಕಾಲೇಜುಗಳು ನೀಡುತ್ತಿವೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಬಳ್ಳಾರಿ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ ಕಟೀಲಿನ ವಿದ್ಯಾ ಸಂಸ್ಥೆಗಳ ಕೊಡುಗೆ ಮಹತ್ತರವಾದುದು ಎಂದರು.
ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಕರ್ನಾಟಕ ಸರಕಾರದ ರಾಜ್ಯ ಸಂಪರ್ಕಾಧಿಕಾರಿ ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಉದ್ಯಮಿಗಳಾದ ಉದಯ ಕುಮಾರ್ ದುಬೈ, ಗಿರೀಶ್ ಶೆಟ್ಟಿ, ಸಂದೇಶ್ ಕುಮಾರ್ ಶೆಟ್ಟಿ, ಆದರ್ಶ ಶೆಟ್ಟಿ ಎಕ್ಕಾರು, ದಿವಾಕರ, ಕೇಶವ ಕಟೀಲು, ಆನಂದ ಶೆಟ್ಟಿ ಎಕ್ಕಾರು, ಪ್ರದ್ಯುಮ್ನ ರಾವ್, ಜಿಲ್ಲಾ ಪಂ. ಸದಸ್ಯ ಈಶ್ವರ್ ಕಟೀಲ್, ಕಟೀಲು ಪ್ರೌಢ ಶಾಲಾ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಧುಕರ ಅಮೀನ್, ಸುಬ್ರಹ್ಮಣ್ಯ ಪ್ರಸಾದ್, ಪ.ಪೂ. ಕಾಲೇಜು ಪ್ರಾಚಾರ್ಯರಾದ ಎಂ. ಬಾಲಕೃಷ್ಣ ಶೆಟ್ಟಿ, ಜಯರಾಮ ಪೂಂಜಾ, ಉಪಪ್ರಾಚಾರ್ಯ ಕೆ.ವಿ.ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವನಮಾಲ, ಮತ್ತಿತರರು ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಹರಿನಾರಾಯಣ ಆಸ್ರಣ್ಣ ಸ್ವಾಗತಿಸಿದರು. ಸಾಯಿನಾಥ ಶೆಟ್ಟಿ ಮತ್ತು ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.
Thursday, January 1, 2015
ಕಟೀಲು ಪದವಿ ಕಾಲೇಜು ರಜತ ಮಹೋತ್ಸವ
ಕೇವಲ ಅಂಕಗಳು ಮಾತ್ರ ಮಾನದಂಡವಾಗಿರಬಾರದು - ವಿನಯ ಹೆಗ್ಡೆ
ಕಿನ್ನಿಗೋಳಿ : ದೇಶದ ಹೆಮ್ಮೆಯ ಸಂಸ್ಕೃತ ಭಾಷೆಯನ್ನು ಕಲಿಸುವ ಶಿಕ್ಷಣ ಸಂಸ್ಥೆಗಳು ಹೆಚ್ಚಾಗಬೇಕು. ಕಲಿಕೆಯಲ್ಲಿ ಅಂಕಗಳಷ್ಟೇ ಮಾನದಂಡವಾಗಿರದೆ ಎಲ್ಲ ವಿಚಾರಗಳಲ್ಲೂ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು ಎಂದು ನಿಟ್ಟೆ ವಿಶ್ವವಿದ್ಯಾಲಯ ಅಧ್ಯಕ್ಷ ವಿನಯ ಎಸ್. ಹೆಗ್ಡೆ ಹೇಳಿದರು.
ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಬೆಳ್ಳಿಹಬ್ಬ ಕಟ್ಟಡಕ್ಕೆ ಶಿಲಾನ್ಯಾಸ ಹಾಗೂ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಭಾಷಾ ಮಾಧ್ಯಮ ಹಾಗೂ ಅಂಕಗಳ ಬಗ್ಗೆ ಪೋಷಕರಲ್ಲಿ ಕೀಳರಿಮೆ ಸರಿಯಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಸಚಿವ ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ಹೇಳಿದರು.
ಕಲಿತ ವಿದ್ಯಾಲಯವನ್ನು ಮರೆಯದೆ ಬಂದು ಹೋಗುವ ಕರ್ತವ್ಯ ವಿದ್ಯಾರ್ಥಿಗಳದ್ದು ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ಮೊಕ್ತೇಸರ ವಾಸುದೇವ ಆಸ್ರಣ್ಣ, ಸಾಂಸದ ನಳಿನ್ಕುಮಾರ್ ಕಟೀಲು, ಕಟೀಲು ದೇವಳ ಆಡಳಿತಾಧಿಕಾರಿ ನಿಂಗಯ್ಯ, ಮುಂಬೈ ಉದ್ಯಮಿ ಎಕ್ಕಾರು ಕೃಷ್ಣ ಡಿ.ಶೆಟ್ಟಿ, ಕುಸುಮೋದರ ಶೆಟ್ಟಿ, ದ.ಕ. ಜಿಲ್ಲಾ ಪಂ. ಸದಸ್ಯ ಈಶ್ವರ ಕಟೀಲ್, ಮುಂಬೈ ತೀಯಾ ಸಮಾಜದ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಪದ್ಮಲತಾ ಉಪಸ್ಥಿತರಿದ್ದರು.
ಪ್ರಾಚಾರ್ಯ ಎಂ. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಕ್ಷೇಮಪಾಲನಾಧಿಕಾರಿ ಡಾ. ಕೃಷ್ಣ ಕಾಂಚನ್ ಹಾಗೂ ಸ್ನಾತಕೋತ್ತರ ಸಂಸ್ಕೃತ ಕಾಲೇಜು ಪ್ರಾಚಾರ್ಯ ಪದ್ಮನಾಭ ಮರಾಠೆ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕ ಎಂ. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.
ಕಿನ್ನಿಗೋಳಿ : ದೇಶದ ಹೆಮ್ಮೆಯ ಸಂಸ್ಕೃತ ಭಾಷೆಯನ್ನು ಕಲಿಸುವ ಶಿಕ್ಷಣ ಸಂಸ್ಥೆಗಳು ಹೆಚ್ಚಾಗಬೇಕು. ಕಲಿಕೆಯಲ್ಲಿ ಅಂಕಗಳಷ್ಟೇ ಮಾನದಂಡವಾಗಿರದೆ ಎಲ್ಲ ವಿಚಾರಗಳಲ್ಲೂ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು ಎಂದು ನಿಟ್ಟೆ ವಿಶ್ವವಿದ್ಯಾಲಯ ಅಧ್ಯಕ್ಷ ವಿನಯ ಎಸ್. ಹೆಗ್ಡೆ ಹೇಳಿದರು.
ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಬೆಳ್ಳಿಹಬ್ಬ ಕಟ್ಟಡಕ್ಕೆ ಶಿಲಾನ್ಯಾಸ ಹಾಗೂ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಭಾಷಾ ಮಾಧ್ಯಮ ಹಾಗೂ ಅಂಕಗಳ ಬಗ್ಗೆ ಪೋಷಕರಲ್ಲಿ ಕೀಳರಿಮೆ ಸರಿಯಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಸಚಿವ ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ಹೇಳಿದರು.
ಕಲಿತ ವಿದ್ಯಾಲಯವನ್ನು ಮರೆಯದೆ ಬಂದು ಹೋಗುವ ಕರ್ತವ್ಯ ವಿದ್ಯಾರ್ಥಿಗಳದ್ದು ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ಮೊಕ್ತೇಸರ ವಾಸುದೇವ ಆಸ್ರಣ್ಣ, ಸಾಂಸದ ನಳಿನ್ಕುಮಾರ್ ಕಟೀಲು, ಕಟೀಲು ದೇವಳ ಆಡಳಿತಾಧಿಕಾರಿ ನಿಂಗಯ್ಯ, ಮುಂಬೈ ಉದ್ಯಮಿ ಎಕ್ಕಾರು ಕೃಷ್ಣ ಡಿ.ಶೆಟ್ಟಿ, ಕುಸುಮೋದರ ಶೆಟ್ಟಿ, ದ.ಕ. ಜಿಲ್ಲಾ ಪಂ. ಸದಸ್ಯ ಈಶ್ವರ ಕಟೀಲ್, ಮುಂಬೈ ತೀಯಾ ಸಮಾಜದ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಪದ್ಮಲತಾ ಉಪಸ್ಥಿತರಿದ್ದರು.
ಪ್ರಾಚಾರ್ಯ ಎಂ. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಕ್ಷೇಮಪಾಲನಾಧಿಕಾರಿ ಡಾ. ಕೃಷ್ಣ ಕಾಂಚನ್ ಹಾಗೂ ಸ್ನಾತಕೋತ್ತರ ಸಂಸ್ಕೃತ ಕಾಲೇಜು ಪ್ರಾಚಾರ್ಯ ಪದ್ಮನಾಭ ಮರಾಠೆ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕ ಎಂ. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.
Saturday, December 27, 2014
ಕಟೀಲು ದೇವಳ ಶಿಕ್ಷಣ ಸಂಸ್ಥೆಗಳ ವಿದ್ಯಾ ಸಂಭ್ರಮ ಉದ್ಘಾಟನೆ
ಮತಬೇಧವಿಲ್ಲದ ದೇಗುಲದಲ್ಲಿ ಮಕ್ಕಳೆಂಬ ದೇವರ ನಿರ್ಮಾಣ- ಫಲಿಮಾರು ಸ್ವಾಮೀಜಿ
ಕಟೀಲು : ಕಟೀಲಿನಲ್ಲಿ ಎರಡು ದೇಗುಲಗಳು. ಒಂದು ಅರ್ಚಕರು ಆರಾಧಿಸುವ ಕಟೀಲು ದೇವಿಯ ದೇಗುಲ. ಮತ್ತೊಂದು ಮಕ್ಕಳೆಂಬ ದೇವರನ್ನು ನಿರ್ಮಿಸುವ ಮತಬೇಧವಿಲ್ಲದ ವಿದ್ಯಾ ದೇಗುಲ ಎಂದು ಕಟೀಲು ಶಾಲೆಯ ಹಳೆ ವಿದ್ಯಾರ್ಥಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಹೇಳಿದರು.
ಅವರು ಶನಿವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಶಿಕ್ಷಣ ಸಂಸ್ಥೆಗಳ ವಿದ್ಯಾ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದೇ ಸಂದರ್ಭ ವಿದ್ಯಾ ಸದನ ಸಭಾಭವನ, ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಸವಿನೆನಪಿನ ಸುವರ್ಣ ಸೌಧದ ಕಛೇರಿ ಕೊಠಡಿ, ಕಂಪ್ಯೂಟರ್ ಕೇಂದ್ರಗಳ ಉದ್ಘಾಟನೆ ಹಾಗೂ ವಿಜ್ಞಾನ ವಿಭಾಗದ ಎರಡನೇ ಮಹಡಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಯುವ ಸಬಲೀಕರಣ ಕ್ರೀಡೆ ಮತ್ತು ಮೀನುಗಾರಿಕಾ ರಾಜ್ಯ ಸಚಿವ ಅಭಯಚಂದ್ರ ಜೈನ್, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹಾಗೂ ಸಾಂಸದ ನಳಿನ್ ಕುಮಾರ್ ಉದ್ಘಾಟನೆಗಳನ್ನು ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಸಭಾಭವನಕ್ಕೆ ರೂ.೩ಲಕ್ಷ ಅನುದಾನ ನೀಡುವುದಾಗಿ ಹೇಳಿದರು.
ಕಟೀಲು ದೇವಳ ಮೊಕ್ತೇಸರ ವಾಸುದೇವ ಆಸ್ರಣ್ಣ, ಕಟೀಲು ದೇವಳ ಆಡಳಿತಾಧಿಕಾರಿ ನಿಂಗಯ್ಯ, ಜಿಲ್ಲಾ ಪಂ. ಸದಸ್ಯ ಈಶ್ವರ ಕಟೀಲು, ತಾ.ಪಂ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾ.ಪಂ ಅಧ್ಯಕ್ಷ ಜನಾರ್ದನ ಕಿಲೆಂಜೂರು, ಬಜಪೆ ಸ್ವಯಂಭೂಲಿಂಗೇಶ್ವರ ದೇವಳ ಆಡಳಿತ ಮೊಕ್ತೇಸರ ಎಲ್.ವಿ.ಅಮೀನ್ ಮುಂಬೈ, ಉದ್ಯಮಿಗಳಾದ ಬಿ. ಟಿ. ಬಂಗೇರ, ಕೃಷ್ಣ ಭಟ್ ತಿರುಪತಿ, ಸಂತೋಷ್ ಕುಮಾರ್ ಶೆಟ್ಟಿ, ಯದುನಾರಾಯಣ ಶೆಟ್ಟಿ, ಎಮ್. ಗಫೂರ್, ಕಟೀಲು ದೇವಳ ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅನಂತಪದ್ಮನಾಭ ಆಸ್ರಣ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಹರಿನಾರಾಯಣದಾಸ ಆಸ್ರಣ್ಣ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟರಮಣ ಹೆಗ್ಡೆ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಧುಕರ ಅಮೀನ್, ಕಟೀಲು ದೇವಳ ಪದವಿ ಕಾಲೇಜು ಪ್ರಿನ್ಸ್ಪಾಲ್ ಎಮ್. ಬಾಲಕೃಷ್ಣ ಶೆಟ್ಟಿ, ಕಟೀಲು ದೇವಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಾಸುದೇವ ಶೆಣೈ ಉಪಸ್ಥಿತರಿದ್ದರು.
ಕಟೀಲು ದೇವಳ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಜಯರಾಮ ಪೂಂಜಾ ಸ್ವಾಗತಿಸಿದರು, ಕಟೀಲು ದೇವಳ ಪ್ರೌಢ ಶಾಲಾ ಉಪಪ್ರಾಚಾರ್ಯ ಕೆ.ವಿ.ಶೆಟ್ಟಿ ಪ್ರಸ್ತಾವನೆಗೈದರು. ಪ್ರೌಢ ಶಾಲಾ ಶಿಕ್ಷಕರಾದ ಸಾಯಿನಾಥ ಶೆಟ್ಟಿ ಮತ್ತು ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಇಂದು(ತಾ.೨೮) ಕಟೀಲು ಪ್ರೌಢಶಾಲೆಯ ಸುವರ್ಣ ಮಹೋತ್ಸವ ನಡೆಯಲಿದೆ.
ಕಟೀಲು : ಕಟೀಲಿನಲ್ಲಿ ಎರಡು ದೇಗುಲಗಳು. ಒಂದು ಅರ್ಚಕರು ಆರಾಧಿಸುವ ಕಟೀಲು ದೇವಿಯ ದೇಗುಲ. ಮತ್ತೊಂದು ಮಕ್ಕಳೆಂಬ ದೇವರನ್ನು ನಿರ್ಮಿಸುವ ಮತಬೇಧವಿಲ್ಲದ ವಿದ್ಯಾ ದೇಗುಲ ಎಂದು ಕಟೀಲು ಶಾಲೆಯ ಹಳೆ ವಿದ್ಯಾರ್ಥಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಹೇಳಿದರು.
ಅವರು ಶನಿವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಶಿಕ್ಷಣ ಸಂಸ್ಥೆಗಳ ವಿದ್ಯಾ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದೇ ಸಂದರ್ಭ ವಿದ್ಯಾ ಸದನ ಸಭಾಭವನ, ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಸವಿನೆನಪಿನ ಸುವರ್ಣ ಸೌಧದ ಕಛೇರಿ ಕೊಠಡಿ, ಕಂಪ್ಯೂಟರ್ ಕೇಂದ್ರಗಳ ಉದ್ಘಾಟನೆ ಹಾಗೂ ವಿಜ್ಞಾನ ವಿಭಾಗದ ಎರಡನೇ ಮಹಡಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಯುವ ಸಬಲೀಕರಣ ಕ್ರೀಡೆ ಮತ್ತು ಮೀನುಗಾರಿಕಾ ರಾಜ್ಯ ಸಚಿವ ಅಭಯಚಂದ್ರ ಜೈನ್, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹಾಗೂ ಸಾಂಸದ ನಳಿನ್ ಕುಮಾರ್ ಉದ್ಘಾಟನೆಗಳನ್ನು ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಸಭಾಭವನಕ್ಕೆ ರೂ.೩ಲಕ್ಷ ಅನುದಾನ ನೀಡುವುದಾಗಿ ಹೇಳಿದರು.
ಕಟೀಲು ದೇವಳ ಮೊಕ್ತೇಸರ ವಾಸುದೇವ ಆಸ್ರಣ್ಣ, ಕಟೀಲು ದೇವಳ ಆಡಳಿತಾಧಿಕಾರಿ ನಿಂಗಯ್ಯ, ಜಿಲ್ಲಾ ಪಂ. ಸದಸ್ಯ ಈಶ್ವರ ಕಟೀಲು, ತಾ.ಪಂ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾ.ಪಂ ಅಧ್ಯಕ್ಷ ಜನಾರ್ದನ ಕಿಲೆಂಜೂರು, ಬಜಪೆ ಸ್ವಯಂಭೂಲಿಂಗೇಶ್ವರ ದೇವಳ ಆಡಳಿತ ಮೊಕ್ತೇಸರ ಎಲ್.ವಿ.ಅಮೀನ್ ಮುಂಬೈ, ಉದ್ಯಮಿಗಳಾದ ಬಿ. ಟಿ. ಬಂಗೇರ, ಕೃಷ್ಣ ಭಟ್ ತಿರುಪತಿ, ಸಂತೋಷ್ ಕುಮಾರ್ ಶೆಟ್ಟಿ, ಯದುನಾರಾಯಣ ಶೆಟ್ಟಿ, ಎಮ್. ಗಫೂರ್, ಕಟೀಲು ದೇವಳ ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅನಂತಪದ್ಮನಾಭ ಆಸ್ರಣ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಹರಿನಾರಾಯಣದಾಸ ಆಸ್ರಣ್ಣ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟರಮಣ ಹೆಗ್ಡೆ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಧುಕರ ಅಮೀನ್, ಕಟೀಲು ದೇವಳ ಪದವಿ ಕಾಲೇಜು ಪ್ರಿನ್ಸ್ಪಾಲ್ ಎಮ್. ಬಾಲಕೃಷ್ಣ ಶೆಟ್ಟಿ, ಕಟೀಲು ದೇವಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಾಸುದೇವ ಶೆಣೈ ಉಪಸ್ಥಿತರಿದ್ದರು.
ಕಟೀಲು ದೇವಳ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಜಯರಾಮ ಪೂಂಜಾ ಸ್ವಾಗತಿಸಿದರು, ಕಟೀಲು ದೇವಳ ಪ್ರೌಢ ಶಾಲಾ ಉಪಪ್ರಾಚಾರ್ಯ ಕೆ.ವಿ.ಶೆಟ್ಟಿ ಪ್ರಸ್ತಾವನೆಗೈದರು. ಪ್ರೌಢ ಶಾಲಾ ಶಿಕ್ಷಕರಾದ ಸಾಯಿನಾಥ ಶೆಟ್ಟಿ ಮತ್ತು ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಇಂದು(ತಾ.೨೮) ಕಟೀಲು ಪ್ರೌಢಶಾಲೆಯ ಸುವರ್ಣ ಮಹೋತ್ಸವ ನಡೆಯಲಿದೆ.
Friday, December 26, 2014
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಿದ್ಯಾಸಂಸ್ಥೆಗಳ ವಿದ್ಯಾ ಸಂಭ್ರಮ
ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಿದ್ಯಾಸಂಸ್ಥೆಗಳ ವಿದ್ಯಾ ಸಂಭ್ರಮವು ದಿನಾಂಕ 27-12-2014 ಶನಿವಾರದಿಂದ ದಿನಾಂಕ 2-1-2015 ರ ಶುಕ್ರವಾರದವರೆಗೆ ನಡೆಯಲಿದೆ.
ದಿನಾಂಕ ೨೭-೧೨-೨೦೧೪ ಶನಿವಾರ ಬೆಳಗ್ಗೆ ಶಾಲೆಯ ಹಳೆವಿದ್ಯಾರ್ಥಿ, ಶ್ರೀ ಫಲಿಮಾರು ಮಠ ಶ್ರೀ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ವಿದ್ಯಾ ಸಂಭ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಚಿವರಾದ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ಪ್ರೌಢಶಾಲೆಯ ಸುವರ್ಣಸೌಧದ ಕಛೇರಿ ಕೊಠಡಿಯನ್ನು ಸಚಿವರಾದ ಬಿ. ರಮಾನಾಥ ರೈ ಉದ್ಘಾಟಿಸಲಿದ್ದು, ಪದವೀಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ಕಟ್ಟಡದ ೨ನೇ ಮಹಡಿ ನಿರ್ಮಾಣಕ್ಕೆ ಚಾಲನೆಯನ್ನು ಐವನ್ ಡಿ’ಸೋಜ ನೀಡಲಿದ್ದಾರೆ.
ಸುವರ್ಣಸೌಧ ಕಂಪ್ಯೂಟರ್ ವಿಭಾಗದ ಉದ್ಘಾಟನೆಯನ್ನು ಸಾಂಸದ ನಳಿನ್ಕುಮಾರ್ ಕಟೀಲ್ ನೆರವೇರಿಸಲಿದ್ದು, ಶ್ರೀವಿದ್ಯಾ ಸದನ ಸಭಾಂಗಣವನ್ನು ಶ್ರೀ ಆಸ್ಕರ್ ಫೆರ್ನಾಂಡಿಸ್ ಉದ್ಘಾಟಿಸಲಿದ್ದಾರೆ.
ತಾ. ೨೮ರಂದು ಪ್ರೌಢಶಾಲೆಯ ಸುವರ್ಣ ಮಹೋತ್ಸವ ಸಮಾರೋಪದಲ್ಲಿ ಅಭಯಚಂದ್ರ ಜೈನ್, ಯು.ಟಿ.ಖಾದರ್, ಮೊಯ್ದಿನ್ ಬಾವಾ, ನಳಿನ್ ಕುಮಾರ್, ಡಾ.ಸುರೇಂದ್ರ ವಿ.ಶೆಟ್ಟಿ, ಡಾ.ಸುರೇಶ್ ರಾವ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.
ತಾ.೨೯ರಂದು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನ ತ್ರಿಂಶದುತ್ಸವ ನಡೆಯಲಿದ್ದು, ಅಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಹರೇಕಳ ಹಾಜಬ್ಬ, ಹರಿಕೃಷ್ಣ ಪುನರೂರು ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ತಾ.೩೦ರಂದು ತ್ರಿಂಶದುತ್ಸವ ಸಮಾರೋಪದಲ್ಲಿ ಅಭಯಚಂದ್ರ ಜೈನ್, ಜೆ.ಆರ್.ಲೋಬೋ, ವಸಂತ ಬಂಗೇರ, ನಳಿನ್ ಕುಮಾರ್, ಅಮರನಾಥ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ.
ತಾ. ೩೦ರಂದು ಹಿರಿಯ ಪ್ರಾಥಮಿಕ ಶಾಲೆಯ ೯೮ನೇ ವಾರ್ಷಿಕೋತ್ಸವದ ಸಂದರ್ಭ ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಶಾರದಾ ಸದನದ ಉದ್ಘಾಟನೆ ಮಾಡಲಿದ್ದು, ಅಭಯಚಂದ್ರ ಜೈನ್, ನಳಿನ್ ಕುಮಾರ್, ಮಾಜಿ ಶಾಸಕ ವಿಜಯಕುಮಾರ ಶೆಟ್ಟಿ, ಎಕ್ಕಾರು ಮೋನಪ್ಪ ಶೆಟ್ಟಿ ಮುಂತಾದವರು ಭಾಗವಹಿಸಲಿದ್ದಾರೆ.
ಜನವರಿ ೧ರಂದು ಪ್ರಥಮ ದರ್ಜೆ ಕಾಲೇಜಿನ ರಜತ ಮಹೋತ್ಸವ ನಡೆಯಲಿದ್ದು, ಈ ನೆನಪಿನ ಕಟ್ಟಡಕ್ಕೆ ನಿಟ್ಟೆ ವಿನಯ ಹೆಗ್ಡೆ ಶಿಲಾನ್ಯಾಸಗೈಯಲಿದ್ದಾರೆ. ಅಭಯಚಂದ್ರ ಜೈನ್, ಗಣೇಶ್ ಕಾರ್ಣಿಕ್, ನಳಿನ್ ಕುಮಾರ್, ಕೃಷ್ಣ ಜೆ.ಪಾಲೇಮಾರ್, ಮಂಗಳೂರು ವಿವಿ ಕುಲಸಚಿವರಾದ ಪಿ.ಎಸ್.ಎಡಪಡಿತ್ತಾಯ, ಎಂ.ಬಿ.ಪುರಾಣಿಕ್, ಅಜಿತ್ಕುಮಾರ ರೈ ಮಾಲಾಡಿ, ಪ್ರದೀಪಕುಮಾರ ಕಲ್ಕೂರ ಮುಂತಾದವರು ಭಾಗವಹಿಸಲಿದ್ದಾರೆ.
ತಾ. ೨ರಂದು ಕಟೀಲು ದೇಗುಲದ ಎಲ್ಲ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳ ಸಂಗಮೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಅಂದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಹಳೆವಿದ್ಯಾರ್ಥಿಗಳನ್ನು ಸಚಿವ ವಿನಯಕುಮಾರ ಸೊರಕೆ ಅಭಿನಂದಿಸಲಿದ್ದು, ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ವಿದ್ಯಾಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎಲ್ಲ ಶಿಕ್ಷಕರನ್ನು ಗೌರವಿಸಲಿದ್ದಾರೆ. ಅಭಯಚಂದ್ರ ಜೈನ್, ನಳಿನ್ ಕುಮಾರ್, ಡಾ.ಮೋಹನ ಆಳ್ವ, ಎ.ಸದಾನಂದ ಶೆಟ್ಟಿ, ಡಾ.ಗಣನಾಥ ಎಕ್ಕಾರು ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.
ದಿನಂಪ್ರತಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲವು ಪ್ರಾಥಮಿಕದಿಂದ ಸಂಸ್ಕೃತ ಸ್ನಾತಕೋತ್ತರ ಪದವಿ ಶಿಕ್ಷಣದವರೆಗೆ ವಿದ್ಯಾಲಯಗಳನ್ನು ನಡೆಸುತ್ತಿದೆ.
ಸಂಸ್ಕೃತ ಸ್ನಾತಕೋತ್ತರ ಅಧ್ಯಯನಕ್ಕಾಗಿರುವ ಶ್ರೀ ದುರ್ಗಾ ಸಂಸ್ಕೃತ ಅಧ್ಯಯನ ಮತ್ತು ಸಂಶೋಧನ ಕೇಂದ್ರವು ಮಂಗಳೂರು ವಿವಿಯ ಏಕೈಕ ಕೇಂದ್ರವಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಊಟ ವಸತಿ ವ್ಯವಸ್ಥೆಯಿದೆ.
ಕಟೀಲು ಶಿಕ್ಷಣ ಸಂಸ್ಥೆಗಳಲ್ಲಿ ಈವರೆಗೆ ಸುಮಾರು ಐವತ್ತು ಸಾವಿರದಷ್ಟು ವಿದ್ಯಾರ್ಥಿಗಳು ವಿದ್ಯಾರ್ಜನೆಗೈದಿದ್ದು, ಪ್ರಸ್ತುತ ೨೫೦೦ ವಿದ್ಯಾರ್ಥಿಗಳು ವ್ಯಾಸಂಗ ನಿರತರಾಗಿದ್ದಾರೆ. ಎಲ್ಲ ವಿದ್ಯಾಸಂಸ್ಥೆಗಳಲ್ಲಿ ದೇಣಿಗೆ ರಹಿತ ಶಿಕ್ಷಣ ನೀಡಲಾಗುತ್ತಿದೆ. ಕನ್ನಡ ಮಾಧ್ಯಮದ ಪ್ರೌಢಶಾಲೆಗಳಲ್ಲಿ ರಾಜ್ಯದಲ್ಲಿ ಅತ್ಯಂತ ಹೆಚ್ಚು ವಿದ್ಯಾರ್ಥಿಗಳನ್ನೊಳಗೊಂಡಿರುವ ದಾಖಲೆ ಕಟೀಲು ಪ್ರೌಢಶಾಲೆಯದ್ದು.
ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಕಂಪ್ಯೂಟರ್ ಶಿಕ್ಷಣದಂತಹ ಸವಲತ್ತುಗಳನ್ನೂ ಒದಗಿಸಲಾಗುತ್ತಿದೆ. ದೇಗುಲವು ಶಿಕ್ಷಣಕ್ಕಾಗಿ ಕಳೆದ ವರ್ಷ ರೂ.೨.೭೧ಕೋಟಿಗಳಷ್ಟನ್ನು ಖರ್ಚು ಮಾಡಿದೆ. ದೇಗುಲದ ವಿದ್ಯಾದಾನಕ್ಕೆ ದೇಣಿಗೆ ನೀಡಿದ್ದಲ್ಲಿ ಆದಾಯ ತೆರಿಗೆ ಕಾಯಿದೆಯ ೮೦ ಜಿ. ತೆರಿಗೆ ವಿನಾಯಿತಿ ಇದೆ.
ಕಟೀಲು ದೇಗುಲವು ಊಟ, ಆಟಗಳಂತೆ ಪಾಠಕ್ಕೆ ಪ್ರಸಿದ್ಧಿ ಹೊಂದಿದ್ದು, ಜಿಲ್ಲೆಯ ವಿವಿಧ ವಿಶೇಷ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಖರ್ಚನ್ನು ಭರಿಸುತ್ತಿದೆ.
Sunday, December 14, 2014
ಯಕ್ಷಗಾನ ವಾಚಿಕ ಸಮಾರಾಧನೆ, ದೃಶ್ಯಾವಳೀ ಕೃತಿಗಳ ಬಿಡುಗಡೆ
ಕಟೀಲು : ಯಕ್ಷಗಾನ ಕಲಾವಿದರು ಅಧ್ಯಯನಾಸಕ್ತರಾಗಬೇಕಾದ ಅಗತ್ಯವಿದೆ ಎಂದು ಖ್ಯಾತ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್ ಹೇಳಿದರು.
ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಸರಸ್ವತಿ ಸದನದಲ್ಲಿ ಯಕ್ಷಗಾನ ಕಲಾವಿದ ಲೇಖಕ ರವಿಶಂಕರ್ ವಳಕ್ಕುಂಜ ರಚಿತ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ವಿಮರ್ಶಕ ಡಾ. ಎಂ. ಪ್ರಭಾಕರ ಜೋಷಿ ಕೃತಿಗಳ ಬಗ್ಗೆ ಮಾತನಾಡಿದರು.
ವಳಕ್ಕುಂಜರ ಯಕ್ಷಗಾನ ಪ್ರಸಂಗ ದ್ಯಶಾವಳೀ ಕೃತಿಯನ್ನು ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ ಹಾಗೂ ಯಕ್ಷಗಾನ ವಾಚಿಕ ಸಮಾರಾಧನೆ ಕೃತಿಯನ್ನು ಪಳ್ಳತ್ತಡ್ಕ ಪರಮೇಶ್ವರ ಭಟ್ಟ ಬಿಡುಗಡೆಗೊಳಿಸಿದರು. ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್, ಕಟೀಲು ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ , ಕಮಲಾದೇವಿ ಪ್ರಸಾದ ಆಸ್ರಣ್ಣ , ಶ್ರೀಹರಿನಾರಾಯಣದಾಸ ಆಸ್ರಣ್ಣ, ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಹಿರಣ್ಯ ವೇಕಟೇಶ್ ಭಟ್ಟ ಉಪಸ್ಥಿರಿದ್ದರು.
ಕೃತಿಕಾರ ರವಿಶಂಕರ ವಳಕ್ಕುಂಜ ಸ್ವಾಗತಿಸಿ, ವಾಸುದೇವರಂಗಾ ಭಟ್ ಹಾಗೂ ರಾಮಜೋಯಿಸ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಸರಸ್ವತಿ ಸದನದಲ್ಲಿ ಯಕ್ಷಗಾನ ಕಲಾವಿದ ಲೇಖಕ ರವಿಶಂಕರ್ ವಳಕ್ಕುಂಜ ರಚಿತ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ವಿಮರ್ಶಕ ಡಾ. ಎಂ. ಪ್ರಭಾಕರ ಜೋಷಿ ಕೃತಿಗಳ ಬಗ್ಗೆ ಮಾತನಾಡಿದರು.
ವಳಕ್ಕುಂಜರ ಯಕ್ಷಗಾನ ಪ್ರಸಂಗ ದ್ಯಶಾವಳೀ ಕೃತಿಯನ್ನು ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ ಹಾಗೂ ಯಕ್ಷಗಾನ ವಾಚಿಕ ಸಮಾರಾಧನೆ ಕೃತಿಯನ್ನು ಪಳ್ಳತ್ತಡ್ಕ ಪರಮೇಶ್ವರ ಭಟ್ಟ ಬಿಡುಗಡೆಗೊಳಿಸಿದರು. ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್, ಕಟೀಲು ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ , ಕಮಲಾದೇವಿ ಪ್ರಸಾದ ಆಸ್ರಣ್ಣ , ಶ್ರೀಹರಿನಾರಾಯಣದಾಸ ಆಸ್ರಣ್ಣ, ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಹಿರಣ್ಯ ವೇಕಟೇಶ್ ಭಟ್ಟ ಉಪಸ್ಥಿರಿದ್ದರು.
ಕೃತಿಕಾರ ರವಿಶಂಕರ ವಳಕ್ಕುಂಜ ಸ್ವಾಗತಿಸಿ, ವಾಸುದೇವರಂಗಾ ಭಟ್ ಹಾಗೂ ರಾಮಜೋಯಿಸ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
Subscribe to:
Posts (Atom)




















